ವಿಜಯಪುರ: ರೈತರ ಅನುಕೂಲಕ್ಕಾಗಿ ರುವ ಅಲ್ಪಾವಧಿ, ದೀರ್ಘಾವಧಿ ಸಾಲಗಳ ಕುರಿತು ಸೂಕ್ತ ಜಾಗೃತಿ ಮೂಡಿಸುವಂತೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ನೀಲಮ್ಮ ಮೇಟಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೆಡಿಪಿ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು ರೈತರಿಗೆ ಸರಿಯಾದ ಮಾಹಿತಿ ಇಲ್ಲದಿರುವುದರಿಂದ ತೀವ್ರ ರೀತಿಯ ತೊಂದರೆಯಾಗುತ್ತಿದೆ ಎಂದರು.
ಬರ ಪರಿಸ್ಥಿತಿ ಇರುವುದರಿಂದ ರೈತರಿಗೆ ಆರ್ಥಿಕವಾಗಿ ಅನುಕೂಲತೆಯ ದೃಷ್ಟಿಯಿಂದ ವಿವಿಧ ಸಾಲಗಳ ಬಗ್ಗೆ ಸೂಕ್ತ ಜಾಗೃತಿ ಮೂಡಿಸಬೇಕು. ವಿಶೇಷ ವಾಗಿ ಕರಪತ್ರ, ಇತರೆ ಮಾಧ್ಯಮಗಳ ಮೂಲಕ ರೈತರಲ್ಲಿ ಜಾಗೃತಿ ಮೂಡಿಸುವುದರ ಮೂಲಕ ಅವರ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.