ತಾಳಿಕೋಟೆ: ಮುಸ್ಲಿಂ ವೆಲ್ಫೇರ್ ಕಮಿಟಿ ವತಿಯಿಂದ ಪಟ್ಟಣದ 5ನೇ ವಾರ್ಡ್ನಲ್ಲಿ ಶ್ರಮದಾನ (ಸ್ವಚ್ಛತಾ) ಕಾರ್ಯಕ್ರಮ ನಡೆಯಿತು. ಜಿಲ್ಲಾ ಯೋಜನಾ ಸಮಿತಿ ಸದಸ್ಯ ಪ್ರಭುಗೌಡ ಮದರಕಲ್, ಪಟ್ಟಣದಲ್ಲಿ ಪುರಸಭೆ ಸ್ವಚ್ಛತೆಯ ಬಗ್ಗೆ ಸಾಕಷ್ಟು ಕ್ರಮ ವಹಿಸಿದ್ದರೂ ನಾಗರಿಕರು ಕೈಜೋಡಿಸದಿರುವುದು ಅನೈರ್ಮಲ್ಯಕ್ಕೆ ಕಾರಣವಾಗಿದೆ. ಪಟ್ಟಣದ ಸ್ವಚ್ಛತೆ ದೃಷ್ಟಿಯಿಂದ ಮುಸ್ಲಿಂ ವೆಲ್ಫೇರ್ ಕಮಿಟಿಯಿಂದ ನಡೆಯುತ್ತಿರುವ ಸ್ವಚ್ಛತಾ ಕಾರ್ಯ ಪ್ರತಿಯೊಬ್ಬರಿಗೂ ಮಾದರಿ ಎಂದರು.
ಕಮಿಟಿ ಅಧ್ಯಕ್ಷ ಮಹಿಬೂಬ್ ಚೋರಗಸ್ತಿ, ಸುತ್ತಮುತ್ತಲಿನ ಪ್ರದೇಶದಲ್ಲಿ ಉತ್ತಮ ಪರಿಸರವಿದ್ದರೇ ಮಾತ್ರ ಮನುಷ್ಯ ಆರೋಗ್ಯವಾಗಿರಲು ಸಾಧ್ಯ. ಹೀಗಾಗಿ ನಾವು ವಾಸಿಸುವ ಪ್ರದೇಶವನ್ನು ಸ್ವಚ್ಛವಾಗಿಡಬೇಕು ಎಂದು ಹೇಳಿದರು.