<p><strong>ವಿಜಯಪುರ: </strong>ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಿಸುತ್ತಿರುವುದರಿಂದ ಹಾಗೂ ಈಗಾಗಲೇ ರೆಡ್ ಜೋನ್ ಎಂದು ಗುರುತಿಸಿಕೊಂಡಿರುವುದರಿಂದ ರಾಜ್ಯ ಸರ್ಕಾರ ಗಂಟಲುದ್ರವ ಪರೀಕ್ಷಾ ಪ್ರಯೋಗಾಲಯವನ್ನು ಜಿಲ್ಲೆಗೆ ಮಂಜೂರು ಮಾಡಿದೆ.</p>.<p>ಜಿಲ್ಲಾಸ್ಪತ್ರೆಯಲ್ಲಿ ‘ಸಿಬಿ ನ್ಯಾಟ್’ ಎಂಬ ಪ್ರಯೋಗಾಲಯ ಶನಿವಾರದಿಂದಲೇ ಕಾರ್ಯಾರಂಭ ಮಾಡಲಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.</p>.<p>ಈ ಪ್ರಯೋಗಾಲಯದಲ್ಲಿ ಒಂದು ಸುತ್ತಿನಲ್ಲಿ 20ರಿಂದ 24 ಪರೀಕ್ಷೆಗಳನ್ನು ಒಮ್ಮೆಗೆ ಮಾಡಬಹುದಾಗಿದೆ. ಇದರಿಂದ ತುರ್ತು ರೋಗಿಗಳ ತಪಾಸಣೆಗೆ ಅನುಕೂಲವಾಗಲಿದೆ ಎಂದು ಹೇಳಿದರು.</p>.<p>ಇದುವರೆಗೆ ಗಂಟಲುದ್ರವ ಪರೀಕ್ಷೆಗಾಗಿ ಕುಲಬುರಗಿ, ಬೆಂಗಳೂರನ್ನು ಅವಲಂಬಿಸಬೇಕಾಗಿತ್ತು. ಇದೀಗ ಇಲ್ಲಿಯೇ ಪ್ರಯೋಗಾಲಯ ಆರಂಭವಾಗಿರುವುದು ನಿಟ್ಟುಸಿರುವ ಬಿಡುವಂತಾಗಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು ಮತ್ತು ಜಿಲ್ಲೆಯ ಅಧಿಕಾರಿಗಳ ಸತತ ಪ್ರಯತ್ನದ ಫಲವಾಗಿ ಪ್ರಯೋಗಾಲಯ ಆರಂಭವಾಗುತ್ತಿರುವುದು ಭವಿಷ್ಯದ ದೃಷ್ಟಿಯಿಂದ ಅನುಕೂಲವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಿಸುತ್ತಿರುವುದರಿಂದ ಹಾಗೂ ಈಗಾಗಲೇ ರೆಡ್ ಜೋನ್ ಎಂದು ಗುರುತಿಸಿಕೊಂಡಿರುವುದರಿಂದ ರಾಜ್ಯ ಸರ್ಕಾರ ಗಂಟಲುದ್ರವ ಪರೀಕ್ಷಾ ಪ್ರಯೋಗಾಲಯವನ್ನು ಜಿಲ್ಲೆಗೆ ಮಂಜೂರು ಮಾಡಿದೆ.</p>.<p>ಜಿಲ್ಲಾಸ್ಪತ್ರೆಯಲ್ಲಿ ‘ಸಿಬಿ ನ್ಯಾಟ್’ ಎಂಬ ಪ್ರಯೋಗಾಲಯ ಶನಿವಾರದಿಂದಲೇ ಕಾರ್ಯಾರಂಭ ಮಾಡಲಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.</p>.<p>ಈ ಪ್ರಯೋಗಾಲಯದಲ್ಲಿ ಒಂದು ಸುತ್ತಿನಲ್ಲಿ 20ರಿಂದ 24 ಪರೀಕ್ಷೆಗಳನ್ನು ಒಮ್ಮೆಗೆ ಮಾಡಬಹುದಾಗಿದೆ. ಇದರಿಂದ ತುರ್ತು ರೋಗಿಗಳ ತಪಾಸಣೆಗೆ ಅನುಕೂಲವಾಗಲಿದೆ ಎಂದು ಹೇಳಿದರು.</p>.<p>ಇದುವರೆಗೆ ಗಂಟಲುದ್ರವ ಪರೀಕ್ಷೆಗಾಗಿ ಕುಲಬುರಗಿ, ಬೆಂಗಳೂರನ್ನು ಅವಲಂಬಿಸಬೇಕಾಗಿತ್ತು. ಇದೀಗ ಇಲ್ಲಿಯೇ ಪ್ರಯೋಗಾಲಯ ಆರಂಭವಾಗಿರುವುದು ನಿಟ್ಟುಸಿರುವ ಬಿಡುವಂತಾಗಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು ಮತ್ತು ಜಿಲ್ಲೆಯ ಅಧಿಕಾರಿಗಳ ಸತತ ಪ್ರಯತ್ನದ ಫಲವಾಗಿ ಪ್ರಯೋಗಾಲಯ ಆರಂಭವಾಗುತ್ತಿರುವುದು ಭವಿಷ್ಯದ ದೃಷ್ಟಿಯಿಂದ ಅನುಕೂಲವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>