ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಇಂದಿನಿಂದ ಭದ್ರಾ ನಾಲೆಗಳಿಗೆ ನೀರು

Last Updated 6 ಜನವರಿ 2020, 15:43 IST
ಅಕ್ಷರ ಗಾತ್ರ

ಶಿವಮೊಗ್ಗ: ಭದ್ರಾ ಜಲಾಶಯದಿಂದ ಎಡದಂಡೆ ನಾಲೆಗೆ ಜ.7 ರಂದು ಮತ್ತು ಬಲದಂಡೆ ನಾಲೆಗೆ 8ರ ಮಧ್ಯರಾತ್ರಿಯಿಂದಲೇ ನೀರು ಹರಿಸಲು ಕರ್ನಾಟಕ ನೀರಾವರಿ ನಿಗಮ ಸೂಚಿಸಿದೆ.

ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಬೇಸಿಗೆ ಹಂಗಾಮಿನ ಬೆಳೆಗಳಿಗೆ, ಆನವೇರಿ ಶಾಖಾ ನಾಲೆ, ದಾವಣಗೆರೆ ಶಾಖಾ ನಾಲೆ, ಮಲೇಬೆನ್ನೂರು ಶಾಖಾ ನಾಲೆ,ದೇವರ ಬೆಳಕೆರೆ ಪಿಕಪ್ ಮತ್ತು ಹರಿಹರ ಶಾಖಾ ನಾಲೆಗಳಲ್ಲಿ ಮೇ 5ರ ವರೆಗೂ ಅಂದರೆ 120 ದಿನಗಳ ಕಾಲ ನಾಲೆಗಳಲ್ಲಿ ನೀರು ಹರಿಯಲಿದೆ.

ಇದರಿಂದ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ 1,02,504 ಹೆಕ್ಟೇರ್ ಪ್ರದೇಶದ ಭತ್ತ, ಕಬ್ಬು, ತೋಟಗಳು ಹಾಗೂ ಅರೆ ನೀರಾವರಿ ಬೆಳೆಗಳಿಗೆ ಅನುಕೂಲವಾಗಲಿದೆ.ವಿತರಣಾ ನಾಲೆಗಳಲ್ಲಿ ಅನುಸರಿಸಬೇಕಾದ ಆಂತರಿಕ ಸರದಿಯನ್ನು ಕಾರ್ಯಪಾಲಕ ಎಂಜಿನಿಯರ್‌ ನಿರ್ಧರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT