ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಮಹಿಳೆ ಸಾವು, 14 ಪ್ರಯಾಣಿಕರಿಗೆ ಗಾಯ

Last Updated 23 ಡಿಸೆಂಬರ್ 2019, 15:38 IST
ಅಕ್ಷರ ಗಾತ್ರ

ಶಿಕಾರಿಪುರ: ತಾಲ್ಲೂಕಿನ ಹೊಸನಗರ ಗ್ರಾಮದ ರಸ್ತೆಯಲ್ಲಿ ಸೋಮವಾರ ಕೆಎಸ್ಆರ್ ಟಿಸಿ ಬಸ್ ಹಾಗೂ ಟಾಟಾ ಏಸ್‌ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಟಾಟಾ ಏಸ್‌ ಚಾಲಕ ಸೇರಿ 14 ಪ್ರಯಾಣಿಕರು ಗಾಯಗೊಂಡಿದ್ದಾರೆ.

ತಾಲ್ಲೂಕಿನ ನೆಲವಾಗಿಲು ಗ್ರಾಮದ ಮಲ್ಲಿಗೆಮ್ಮ (55) ಮೃತಪಟ್ಟವರು.

ಮತ್ತಿಕೋಟೆ ಗ್ರಾಮ ಸಮೀಪದ ಕೃಷಿ ಭೂಮಿಯಲ್ಲಿ ಶುಂಠಿ ಕೀಳುವ ಕೆಲಸಕ್ಕೆ ನೆಲವಾಗಿಲು ಗ್ರಾಮದಿಂದ 15 ಜನರು ತೆರಳಿದ್ದರು. ಕೆಲಸ ಮುಗಿಸಿ ಟಾಟಾ ಏಸ್‌ನಲ್ಲಿ ಹಿಂತಿರುಗುತ್ತಿದ್ದ ವೇಳೆ ಮಾಸೂರು ಮಾರ್ಗದಿಂದ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದೆ.

ಚಿಕಿತ್ಸೆಗೆ ಸ್ಪಂದಿಸದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಲ್ಲಿಗೆಮ್ಮ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ, ಸತ್ಯನಾರಾಯಣ ಮೂರ್ತಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT