ಅರಳೆಪೇಟೆಯಲ್ಲಿ ನಡೆಯುತ್ತಿರುವ ಚರಂಡಿ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು. ಅರಳೆಪೇಟೆ ಚರಂಡಿಯಲ್ಲಿ ಹೂಳು ತುಂಬಿದೆ. ಹೂಳು ತೆಗೆದಿದ್ದರೆ ಸಾಕಾಗಿತ್ತು. ಬದಲಾಗಿ ರಸ್ತೆಯನ್ನು ಬೇಕಾಬಿಟ್ಟಿ ಅಗೆಯಲಾಗಿದೆ. ಒಂದು ಕಡೆ ಕಟ್ಟಿರುವ ಚರಂಡಿ ಕಾಮಗಾರಿ ಕಳಪೆಯಾಗಿದೆ. ಚರಂಡಿ ನಿರ್ಮಿಸುವಾಗ ತೆಗೆದ ಗುಂಡಿಗಳಿಗೆ ತ್ಯಾಜ್ಯದಿಂದ ಕೂಡಿರುವ ಹಳೆ ಮನೆ ಮಣ್ಣು ತುಂಬಲಾಗುತ್ತಿದೆ ಎಂದರು.