ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳಪೆ ಕಾಮಗಾರಿ: ಆರೋಪ

Last Updated 6 ಡಿಸೆಂಬರ್ 2018, 13:18 IST
ಅಕ್ಷರ ಗಾತ್ರ

ಮಾಗಡಿ: ಪುರಸಭೆ ವ್ಯಾಪ್ತಿಯ ನಗರೋತ್ಧಾನ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ ಎಂದು ಎಪಿಎಂಸಿ ನಿರ್ದೇಶಕ ಸಿ.ಎಂ.ಮಾರೇಗೌಡ ಆರೋಪಿಸಿದರು.

ಅರಳೆಪೇಟೆಯಲ್ಲಿ ನಡೆಯುತ್ತಿರುವ ಚರಂಡಿ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು. ಅರಳೆಪೇಟೆ ಚರಂಡಿಯಲ್ಲಿ ಹೂಳು ತುಂಬಿದೆ. ಹೂಳು ತೆಗೆದಿದ್ದರೆ ಸಾಕಾಗಿತ್ತು. ಬದಲಾಗಿ ರಸ್ತೆಯನ್ನು ಬೇಕಾಬಿಟ್ಟಿ ಅಗೆಯಲಾಗಿದೆ. ಒಂದು ಕಡೆ ಕಟ್ಟಿರುವ ಚರಂಡಿ ಕಾಮಗಾರಿ ಕಳಪೆಯಾಗಿದೆ. ಚರಂಡಿ ನಿರ್ಮಿಸುವಾಗ ತೆಗೆದ ಗುಂಡಿಗಳಿಗೆ ತ್ಯಾಜ್ಯದಿಂದ ಕೂಡಿರುವ ಹಳೆ ಮನೆ ಮಣ್ಣು ತುಂಬಲಾಗುತ್ತಿದೆ ಎಂದರು.

ಪುರಸಭೆ ಸದಸ್ಯೆ ಶಿವರುದ್ರಮ್ಮ ವಿಜಯಕುಮಾರ್‌ ಮಾತನಾಡಿ, ಗುಣಮಟ್ಟದಲ್ಲಿ ಚರಂಡಿ ಕಾಮಗಾರಿ ನಡೆಸಲು ಗುತ್ತಿಗೆದಾರ ಮತ್ತು ಅಧಿಕಾರಿಗಳಿಗೆ ಸೂಚಿಸಿದ್ದರೂ ಮನವಿಗೆ ಸ್ಪಂದಿಸಿಲ್ಲ ಎಂದರು.

ಮುಖ್ಯಾಧಿಕಾರಿ ನಟರಾಜ್‌ ಮತ್ತು ಎಂಜಿನಿಯರ್‌ ಪ್ರಕಾಶ್‌ ಶೆಟ್ಟಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದರು. ಗುಣಮಟ್ಟದ ಕಾಮಗಾರಿ ಮಾಡಿಸುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT