<p><strong>ಯಾದಗಿರಿ</strong>: ಶೈಕ್ಷಣಿಕ ವರ್ಷ ಪ್ರಾರಂಭವಾಗಿ ತಿಂಗಳು ಕಳೆಯುವಷ್ಟರಲ್ಲಿ ಮತ್ತೊಮ್ಮೆ ಶಿಕ್ಷಕರ ವರ್ಗಾವಣೆಯ ಗುಮ್ಮ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಶಿಕ್ಷಕರಿಲ್ಲದೇ ನರಳುತ್ತಿರುವ ಮಕ್ಕಳಿಗೆ, ಮತ್ತಷ್ಟು ಶಿಕ್ಷಕರ ಕೊರತೆ ಎದುರಾಗುವ ಸಾಧ್ಯತೆಗಳು ದಟ್ಟವಾಗುತ್ತಿವೆ.<br /> <br /> ಕಳೆದ ಮೂರ್ನಾಲ್ಕು ವರ್ಷ ನಡೆದ ವರ್ಗಾವಣೆಯಿಂದಾಗಿ ಜಿಲ್ಲೆಯಲ್ಲಿ ಸದ್ಯಕ್ಕೆ ಸುಮಾರು 1,100 ಪ್ರಾಥಮಿಕ ಶಾಲಾ ಶಿಕ್ಷಕರ ಕೊರತೆ ಎದುರಾಗಿದೆ. ಇದೀಗ ನಡೆಯುತ್ತಿರುವ ವರ್ಗಾವಣೆ ಪ್ರಕ್ರಿಯೆಯಿಂದ ಈ ಸಂಖ್ಯೆ ಮತ್ತಷ್ಟು ಏರಿಕೆ ಆಗಬಹುದು ಎಂದು ಇಲಾಖೆಯ ಅಧಿಕಾರಿಗಳೇ ಹೇಳುತ್ತಿದ್ದಾರೆ.<br /> <br /> ಯಾದಗಿರಿ ಸೇರಿದಂತೆ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಸಾಕಷ್ಟಿದೆ. ಒಂದೆಡೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ. ಇನ್ನೊಂದೆಡೆ ವರ್ಗಾವಣೆ ಪ್ರಕ್ರಿಯೆಯನ್ನು ಕೈಬಿಡುವಂತಿಲ್ಲ. ಕಳೆದ ವರ್ಷ ನೇಮಕಾತಿ ಆರಂಭವಾಗಿದ್ದರೂ, ನಂತರ ಪ್ರಕ್ರಿಯೆ ಸ್ಥಗಿತಗೊಂಡಿತು.<br /> <br /> ಇದೀಗ ಹೊಸ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಬಗ್ಗೆ ಪ್ರಸ್ತಾಪಿಸಿದ್ದು, ಪ್ರಕ್ರಿಯೆ ಯಾವಾಗ ಆರಂಭವಾಗಲಿದೆಯೋ ತಿಳಿಯುತ್ತಿಲ್ಲ.<br /> <br /> ಇದರ ಮಧ್ಯೆ ಸಂವಿಧಾನದ 371 ನೇ ಕಲಂ ತಿದ್ದುಪಡಿ ಮಸೂದೆ ಜಾರಿಯಾಗುವವರೆಗೆ ಶಿಕ್ಷಕರ ನೇಮಕಾತಿಯನ್ನೂ ತಡೆಹಿಡಿಯಲಾಗುತ್ತಿದೆ. ಹೀಗಾಗಿ ಈ ಭಾಗದ ಜಿಲ್ಲೆಯ ಅನೇಕ ಪ್ರಾಥಮಿಕ ಶಾಲೆಗಳು ಶಿಕ್ಷಕರ ಕೊರತೆ ಎದುರಿಸುವಂತಾಗಿದೆ ಎಂದು ಹೇಳಲಾಗುತ್ತಿದೆ.<br /> <br /> ಜಿಲ್ಲೆಯಲ್ಲಿ 1,077 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಸುಮಾರು 1,87,710 ಮಕ್ಕಳ ದಾಖಲಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ಕೊರತೆಯಿಲ್ಲ. ಕಡಿಮೆ ಮಕ್ಕಳಿರುವ ಶಾಲೆಗಳ ವಿಲೀನಗೊಳಿಸುವ ಸರ್ಕಾರದ ಕ್ರಮದಿಂದ ಜಿಲ್ಲೆಯಲ್ಲಿ ಯಾವುದೇ ಪರಿಣಾಮ ಬೀರುತ್ತಿಲ್ಲ.<br /> <br /> ಕಡಿಮೆ ಮಕ್ಕಳಿರುವ ಶಾಲೆಗಳನ್ನು ವಿಲೀನಗೊಳಿಸುವ ಸರ್ಕಾರ, ಹೆಚ್ಚಿನ ಸಂಖ್ಯೆಯ ಮಕ್ಕಳಿರುವಲ್ಲಿ ಶಿಕ್ಷಕರ ನೇಮಕಾತಿಯ ಬಗ್ಗೆ ಗಮನಹರಿಸುತ್ತಿಲ್ಲ. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಮಂಜೂರಾಗಿರುವ ಹುದ್ದೆಯ ಅರ್ಧದಷ್ಟು ಶಿಕ್ಷಕರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ.<br /> <br /> ಇದರಿಂದ ಮಕ್ಕಳ ಶೈಕ್ಷಣಿಕ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ ಎಂದು ನೇತಾಜಿ ಯುವ ಸೇನೆಯ ಅಧ್ಯಕ್ಷ ನಿಂಗು ಜಡಿ ಹೇಳುತ್ತಾರೆ.<br /> <br /> <strong>1,100 ಶಿಕ್ಷಕರ ಹುದ್ದೆ ಖಾಲಿ: </strong>ಕಳೆದ ಮೂರು ವರ್ಷಗಳಿಂದ ವರ್ಗಾವಣೆ ಆದಷ್ಟು ಶಿಕ್ಷಕರು ಜಿಲ್ಲೆಗೆ ಬರುತ್ತಿಲ್ಲ. ಇಲ್ಲಿಂದ ಹೊರಗೆ ಹೋಗುವವರ ಸಂಖ್ಯೆಗೂ ಹಾಗೂ ಹೊರ ಜಿಲ್ಲೆಗಳಿಂದ ಇಲ್ಲಿಗೆ ಬರುವವರ ಸಂಖ್ಯೆಯೂ ಸಾಕಷ್ಟು ವ್ಯತ್ಯಾಸವಾಗುತ್ತಿದೆ.<br /> <br /> ಕಳೆದ ವರ್ಷವೇ ಜಿಲ್ಲೆಯಲ್ಲಿ 1,100 ರಷ್ಟು ಶಿಕ್ಷಕರ ಹುದ್ದೆ ಖಾಲಿ ಉಳಿದಿದ್ದವು. ಇದೀಗ ಈಗ ಮತ್ತೆ ಶೇ.1 ರಷ್ಟು ಶಿಕ್ಷಕ ಅಂತರ ಜಿಲ್ಲಾ ವರ್ಗಾವಣೆ ನಿಶ್ಚಿತ ಎಂದು ಹೇಳಲಾಗುತ್ತಿದೆ. ಆದರೆ ಈ ಬಾರಿಯೂ ಬೇರೆ ಜಿಲ್ಲೆಗಳಿಂದ ವರ್ಗಾವಣೆ ಮಾಡಿಸಿಕೊಂಡು ಯಾದಗಿರಿ ಜಿಲ್ಲೆಗೆ ಬರುವ ಶಿಕ್ಷಕರು ಬೆರಳೆಣಿಕೆಯಷ್ಟು ಮಾತ್ರ. ಹೀಗಾಗಿ ಈ ಬಾರಿಯೂ ಶಿಕ್ಷಕರ ಹುದ್ದೆಗಳ ಕೊರತೆ ಮತ್ತಷ್ಟು ಹೆಚ್ಚಾಗಲಿದೆ.<br /> <br /> ಯಾದಗಿರಿ ಜಿಲ್ಲೆಯೂ ಶಿಕ್ಷಕರ ಪ್ರಾರಂಭಿಕ ತಾಣವಾಗಿ ಪರಿಣಮಿಸಿದೆ. ಯಾದಗಿರಿ ಜಿಲ್ಲೆಗೆ ಮಂಜೂರಾಗಿರುವ ಹುದ್ದೆಗಳು ಸುಲಭವಾಗಿ ಸಿಗುವುದರಿಂದ ಬೇರೆ ಜಿಲ್ಲೆಗಳ ಅಭ್ಯರ್ಥಿಗಳು ಇಲ್ಲಿಗೆ ಆಯ್ಕೆಯಾಗಿ ಬರುತ್ತಾರೆ.<br /> <br /> ಜಿಲ್ಲೆಯಲ್ಲಿ ನೇಮಕಗೊಂಡು 2-3 ವರ್ಷ ಕಳೆಯುವಷ್ಟರಲ್ಲಿಯೇ ಯಾವುದಾರೂ ನೆಪವೊಡ್ಡಿ ವರ್ಗಾವಣೆ ಮಾಡಿಸಿಕೊಂಡು ಹೋಗುತ್ತಾರೆ.<br /> <br /> ಆದರೆ ಬೇರೆ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯಾರೂ ಇಲ್ಲಿಗೆ ಬರುತ್ತಿಲ್ಲ. ಪ್ರತಿ ವರ್ಗಾವಣೆ ಸಂದರ್ಭದಲ್ಲೂ ಶಿಕ್ಷಕರು ಹುದ್ದೆಗಳು ಖಾಲಿಯಾಗುತ್ತಿವೆಯೇ ಹೊರತು ಅದಕ್ಕೆ ಅನುಗುಣವಾಗಿ ಶಿಕ್ಷಕರು ಬರುತ್ತಿಲ್ಲ.<br /> <br /> ಗೌರವ ಶಿಕ್ಷಕರ ನೇಮಕಕ್ಕೆ ಕ್ರಮ: ಜಿಲ್ಲೆಯಲ್ಲಿನ ಶಿಕ್ಷಕರ ಕೊರತೆ ನೀಗಿಸಲು ಗೌರವ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅದಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆ ದೊರೆತ ತಕ್ಷಣ ಅವಶ್ಯಕತೆ ಇರುವ ಶಾಲೆಗಳಲ್ಲಿ ಗೌರವ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಡಿಡಿಪಿಐ ರಾಮಾಂಜನೇಯ ಹೇಳುತ್ತಾರೆ.<br /> <br /> ಸರ್ಕಾರ ನಿಯಮಾವಳಿಗಳ ಪ್ರಕಾರ ವರ್ಗಾವಣೆ ಮಾಡುವುದು ಅನಿವಾರ್ಯ. ಕಳೆದ ಮೂರ್ನಾಲ್ಕು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ಇಲ್ಲದೇ ಇರುವುದರಿಂದ ಶಿಕ್ಷಕರ ಕೊರತೆ ಹೆಚ್ಚಾಗಿದೆ. ಆದರೂ ಗೌರವ ಶಿಕ್ಷಕರ ನೇಮಕಾತಿ ಮೂಲಕ ಶಿಕ್ಷಕರ ಕೊರತೆಯನ್ನು ಆದಷ್ಟು ನೀಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಶೈಕ್ಷಣಿಕ ವರ್ಷ ಪ್ರಾರಂಭವಾಗಿ ತಿಂಗಳು ಕಳೆಯುವಷ್ಟರಲ್ಲಿ ಮತ್ತೊಮ್ಮೆ ಶಿಕ್ಷಕರ ವರ್ಗಾವಣೆಯ ಗುಮ್ಮ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಶಿಕ್ಷಕರಿಲ್ಲದೇ ನರಳುತ್ತಿರುವ ಮಕ್ಕಳಿಗೆ, ಮತ್ತಷ್ಟು ಶಿಕ್ಷಕರ ಕೊರತೆ ಎದುರಾಗುವ ಸಾಧ್ಯತೆಗಳು ದಟ್ಟವಾಗುತ್ತಿವೆ.<br /> <br /> ಕಳೆದ ಮೂರ್ನಾಲ್ಕು ವರ್ಷ ನಡೆದ ವರ್ಗಾವಣೆಯಿಂದಾಗಿ ಜಿಲ್ಲೆಯಲ್ಲಿ ಸದ್ಯಕ್ಕೆ ಸುಮಾರು 1,100 ಪ್ರಾಥಮಿಕ ಶಾಲಾ ಶಿಕ್ಷಕರ ಕೊರತೆ ಎದುರಾಗಿದೆ. ಇದೀಗ ನಡೆಯುತ್ತಿರುವ ವರ್ಗಾವಣೆ ಪ್ರಕ್ರಿಯೆಯಿಂದ ಈ ಸಂಖ್ಯೆ ಮತ್ತಷ್ಟು ಏರಿಕೆ ಆಗಬಹುದು ಎಂದು ಇಲಾಖೆಯ ಅಧಿಕಾರಿಗಳೇ ಹೇಳುತ್ತಿದ್ದಾರೆ.<br /> <br /> ಯಾದಗಿರಿ ಸೇರಿದಂತೆ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಸಾಕಷ್ಟಿದೆ. ಒಂದೆಡೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ. ಇನ್ನೊಂದೆಡೆ ವರ್ಗಾವಣೆ ಪ್ರಕ್ರಿಯೆಯನ್ನು ಕೈಬಿಡುವಂತಿಲ್ಲ. ಕಳೆದ ವರ್ಷ ನೇಮಕಾತಿ ಆರಂಭವಾಗಿದ್ದರೂ, ನಂತರ ಪ್ರಕ್ರಿಯೆ ಸ್ಥಗಿತಗೊಂಡಿತು.<br /> <br /> ಇದೀಗ ಹೊಸ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಬಗ್ಗೆ ಪ್ರಸ್ತಾಪಿಸಿದ್ದು, ಪ್ರಕ್ರಿಯೆ ಯಾವಾಗ ಆರಂಭವಾಗಲಿದೆಯೋ ತಿಳಿಯುತ್ತಿಲ್ಲ.<br /> <br /> ಇದರ ಮಧ್ಯೆ ಸಂವಿಧಾನದ 371 ನೇ ಕಲಂ ತಿದ್ದುಪಡಿ ಮಸೂದೆ ಜಾರಿಯಾಗುವವರೆಗೆ ಶಿಕ್ಷಕರ ನೇಮಕಾತಿಯನ್ನೂ ತಡೆಹಿಡಿಯಲಾಗುತ್ತಿದೆ. ಹೀಗಾಗಿ ಈ ಭಾಗದ ಜಿಲ್ಲೆಯ ಅನೇಕ ಪ್ರಾಥಮಿಕ ಶಾಲೆಗಳು ಶಿಕ್ಷಕರ ಕೊರತೆ ಎದುರಿಸುವಂತಾಗಿದೆ ಎಂದು ಹೇಳಲಾಗುತ್ತಿದೆ.<br /> <br /> ಜಿಲ್ಲೆಯಲ್ಲಿ 1,077 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಸುಮಾರು 1,87,710 ಮಕ್ಕಳ ದಾಖಲಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ಕೊರತೆಯಿಲ್ಲ. ಕಡಿಮೆ ಮಕ್ಕಳಿರುವ ಶಾಲೆಗಳ ವಿಲೀನಗೊಳಿಸುವ ಸರ್ಕಾರದ ಕ್ರಮದಿಂದ ಜಿಲ್ಲೆಯಲ್ಲಿ ಯಾವುದೇ ಪರಿಣಾಮ ಬೀರುತ್ತಿಲ್ಲ.<br /> <br /> ಕಡಿಮೆ ಮಕ್ಕಳಿರುವ ಶಾಲೆಗಳನ್ನು ವಿಲೀನಗೊಳಿಸುವ ಸರ್ಕಾರ, ಹೆಚ್ಚಿನ ಸಂಖ್ಯೆಯ ಮಕ್ಕಳಿರುವಲ್ಲಿ ಶಿಕ್ಷಕರ ನೇಮಕಾತಿಯ ಬಗ್ಗೆ ಗಮನಹರಿಸುತ್ತಿಲ್ಲ. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಮಂಜೂರಾಗಿರುವ ಹುದ್ದೆಯ ಅರ್ಧದಷ್ಟು ಶಿಕ್ಷಕರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ.<br /> <br /> ಇದರಿಂದ ಮಕ್ಕಳ ಶೈಕ್ಷಣಿಕ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ ಎಂದು ನೇತಾಜಿ ಯುವ ಸೇನೆಯ ಅಧ್ಯಕ್ಷ ನಿಂಗು ಜಡಿ ಹೇಳುತ್ತಾರೆ.<br /> <br /> <strong>1,100 ಶಿಕ್ಷಕರ ಹುದ್ದೆ ಖಾಲಿ: </strong>ಕಳೆದ ಮೂರು ವರ್ಷಗಳಿಂದ ವರ್ಗಾವಣೆ ಆದಷ್ಟು ಶಿಕ್ಷಕರು ಜಿಲ್ಲೆಗೆ ಬರುತ್ತಿಲ್ಲ. ಇಲ್ಲಿಂದ ಹೊರಗೆ ಹೋಗುವವರ ಸಂಖ್ಯೆಗೂ ಹಾಗೂ ಹೊರ ಜಿಲ್ಲೆಗಳಿಂದ ಇಲ್ಲಿಗೆ ಬರುವವರ ಸಂಖ್ಯೆಯೂ ಸಾಕಷ್ಟು ವ್ಯತ್ಯಾಸವಾಗುತ್ತಿದೆ.<br /> <br /> ಕಳೆದ ವರ್ಷವೇ ಜಿಲ್ಲೆಯಲ್ಲಿ 1,100 ರಷ್ಟು ಶಿಕ್ಷಕರ ಹುದ್ದೆ ಖಾಲಿ ಉಳಿದಿದ್ದವು. ಇದೀಗ ಈಗ ಮತ್ತೆ ಶೇ.1 ರಷ್ಟು ಶಿಕ್ಷಕ ಅಂತರ ಜಿಲ್ಲಾ ವರ್ಗಾವಣೆ ನಿಶ್ಚಿತ ಎಂದು ಹೇಳಲಾಗುತ್ತಿದೆ. ಆದರೆ ಈ ಬಾರಿಯೂ ಬೇರೆ ಜಿಲ್ಲೆಗಳಿಂದ ವರ್ಗಾವಣೆ ಮಾಡಿಸಿಕೊಂಡು ಯಾದಗಿರಿ ಜಿಲ್ಲೆಗೆ ಬರುವ ಶಿಕ್ಷಕರು ಬೆರಳೆಣಿಕೆಯಷ್ಟು ಮಾತ್ರ. ಹೀಗಾಗಿ ಈ ಬಾರಿಯೂ ಶಿಕ್ಷಕರ ಹುದ್ದೆಗಳ ಕೊರತೆ ಮತ್ತಷ್ಟು ಹೆಚ್ಚಾಗಲಿದೆ.<br /> <br /> ಯಾದಗಿರಿ ಜಿಲ್ಲೆಯೂ ಶಿಕ್ಷಕರ ಪ್ರಾರಂಭಿಕ ತಾಣವಾಗಿ ಪರಿಣಮಿಸಿದೆ. ಯಾದಗಿರಿ ಜಿಲ್ಲೆಗೆ ಮಂಜೂರಾಗಿರುವ ಹುದ್ದೆಗಳು ಸುಲಭವಾಗಿ ಸಿಗುವುದರಿಂದ ಬೇರೆ ಜಿಲ್ಲೆಗಳ ಅಭ್ಯರ್ಥಿಗಳು ಇಲ್ಲಿಗೆ ಆಯ್ಕೆಯಾಗಿ ಬರುತ್ತಾರೆ.<br /> <br /> ಜಿಲ್ಲೆಯಲ್ಲಿ ನೇಮಕಗೊಂಡು 2-3 ವರ್ಷ ಕಳೆಯುವಷ್ಟರಲ್ಲಿಯೇ ಯಾವುದಾರೂ ನೆಪವೊಡ್ಡಿ ವರ್ಗಾವಣೆ ಮಾಡಿಸಿಕೊಂಡು ಹೋಗುತ್ತಾರೆ.<br /> <br /> ಆದರೆ ಬೇರೆ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯಾರೂ ಇಲ್ಲಿಗೆ ಬರುತ್ತಿಲ್ಲ. ಪ್ರತಿ ವರ್ಗಾವಣೆ ಸಂದರ್ಭದಲ್ಲೂ ಶಿಕ್ಷಕರು ಹುದ್ದೆಗಳು ಖಾಲಿಯಾಗುತ್ತಿವೆಯೇ ಹೊರತು ಅದಕ್ಕೆ ಅನುಗುಣವಾಗಿ ಶಿಕ್ಷಕರು ಬರುತ್ತಿಲ್ಲ.<br /> <br /> ಗೌರವ ಶಿಕ್ಷಕರ ನೇಮಕಕ್ಕೆ ಕ್ರಮ: ಜಿಲ್ಲೆಯಲ್ಲಿನ ಶಿಕ್ಷಕರ ಕೊರತೆ ನೀಗಿಸಲು ಗೌರವ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅದಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆ ದೊರೆತ ತಕ್ಷಣ ಅವಶ್ಯಕತೆ ಇರುವ ಶಾಲೆಗಳಲ್ಲಿ ಗೌರವ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಡಿಡಿಪಿಐ ರಾಮಾಂಜನೇಯ ಹೇಳುತ್ತಾರೆ.<br /> <br /> ಸರ್ಕಾರ ನಿಯಮಾವಳಿಗಳ ಪ್ರಕಾರ ವರ್ಗಾವಣೆ ಮಾಡುವುದು ಅನಿವಾರ್ಯ. ಕಳೆದ ಮೂರ್ನಾಲ್ಕು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ಇಲ್ಲದೇ ಇರುವುದರಿಂದ ಶಿಕ್ಷಕರ ಕೊರತೆ ಹೆಚ್ಚಾಗಿದೆ. ಆದರೂ ಗೌರವ ಶಿಕ್ಷಕರ ನೇಮಕಾತಿ ಮೂಲಕ ಶಿಕ್ಷಕರ ಕೊರತೆಯನ್ನು ಆದಷ್ಟು ನೀಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>