<p><strong>ಯಾದಗಿರಿ:</strong> ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಭಾನುವಾರ 117 ಜನರು ಸಂಪೂರ್ಣ ಗುಣಮುಖರಾಗಿದ್ದಾರೆ. ಹೊಸದಾಗಿ 100 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,498ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಇದುವರೆಗೆ 8,423 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ.</p>.<p>ಜಿಲ್ಲೆಯಲ್ಲಿ ಕೋವಿಡ್ನಿಂದ 56 ವರ್ಷದ ಪುರುಷ ಶನಿವಾರ ಮೃತಪಟ್ಟಿದ್ದು, ಒಟ್ಟಾರೆ ಸೋಂಕಿನಿಂದ 58 ಜನರು ಮೃತಪಟ್ಟಿದ್ದಾರೆ. 1,017 ಕೋವಿಡ್ ಸಕ್ರಿಯ ಪ್ರಕರಣಗಳಿವೆ.</p>.<p>***</p>.<p><strong>ವಿದ್ಯಾಗಮ: ಇಬ್ಬರು ಶಿಕ್ಷಕರಿಗೆ ಕೋವಿಡ್<br />ಯಾದಗಿರಿ: </strong>ಜಿಲ್ಲೆಯ ಸುರಪುರ ತಾಲ್ಲೂಕಿನ ರತ್ತಾಳ ಗ್ರಾಮದ ಸರ್ಕಾರಿ ಶಾಲೆಯ ಇಬ್ಬರು ಶಿಕ್ಷಕರಿಗೆ ಕೋವಿಡ್–19 ದೃಢವಾಗಿದೆ.</p>.<p>ಗ್ರಾಮದ ಅಂಬಿಗರ ಚೌಡಯ್ಯ ಸಮುದಾಯ ಭವನ, ಕೃಷ್ಣ ಮಂದಿರ ವಠಾರ ಪಾಠಗಳಲ್ಲಿ ಶಿಕ್ಷಕರು ಪಾಠ ಮಾಡಿದ್ದರು. ಇದರಿಂದ ಈಗ ಪ್ರಾಥಮಿಕ ಸಂಪರ್ಕದಲ್ಲಿರುವ ಮಕ್ಕಳ ಪಾಲಕರಲ್ಲಿ ಆತಂಕ ಮನೆ ಮೂಡಿದೆ.</p>.<p><strong>ಜಿಲ್ಲೆಯಲ್ಲಿ 42 ಶಿಕ್ಷಕರಿಗೆ ಕೋವಿಡ್:</strong> ‘ಜಿಲ್ಲೆಯಲ್ಲಿ ಇದುವರೆಗೆ 42 ಶಿಕ್ಷಕರಿಗೆ ಕೋವಿಡ್ ದೃಢವಾಗಿದ್ದು, ಇದರಲ್ಲಿ ಮೂವರು ಮೃತಪಟ್ಟಿದ್ದಾರೆ. 39 ಶಿಕ್ಷಕರು ಗುಣಮುಖರಾಗಿದ್ದಾರೆ’ ಎಂದು ಡಿಡಿಪಿಐ ಶ್ರೀನಿವಾಸರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಜಿಲ್ಲೆಯಲ್ಲಿ ವಿವಿಧ ತಾಲ್ಲೂಕುಗಳಲ್ಲಿ 200ಕ್ಕೂ ಹೆಚ್ಚು ವಿದ್ಯಾಗಮ ವಠಾರ ಪಾಠ ನಡೆಯುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಭಾನುವಾರ 117 ಜನರು ಸಂಪೂರ್ಣ ಗುಣಮುಖರಾಗಿದ್ದಾರೆ. ಹೊಸದಾಗಿ 100 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,498ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಇದುವರೆಗೆ 8,423 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ.</p>.<p>ಜಿಲ್ಲೆಯಲ್ಲಿ ಕೋವಿಡ್ನಿಂದ 56 ವರ್ಷದ ಪುರುಷ ಶನಿವಾರ ಮೃತಪಟ್ಟಿದ್ದು, ಒಟ್ಟಾರೆ ಸೋಂಕಿನಿಂದ 58 ಜನರು ಮೃತಪಟ್ಟಿದ್ದಾರೆ. 1,017 ಕೋವಿಡ್ ಸಕ್ರಿಯ ಪ್ರಕರಣಗಳಿವೆ.</p>.<p>***</p>.<p><strong>ವಿದ್ಯಾಗಮ: ಇಬ್ಬರು ಶಿಕ್ಷಕರಿಗೆ ಕೋವಿಡ್<br />ಯಾದಗಿರಿ: </strong>ಜಿಲ್ಲೆಯ ಸುರಪುರ ತಾಲ್ಲೂಕಿನ ರತ್ತಾಳ ಗ್ರಾಮದ ಸರ್ಕಾರಿ ಶಾಲೆಯ ಇಬ್ಬರು ಶಿಕ್ಷಕರಿಗೆ ಕೋವಿಡ್–19 ದೃಢವಾಗಿದೆ.</p>.<p>ಗ್ರಾಮದ ಅಂಬಿಗರ ಚೌಡಯ್ಯ ಸಮುದಾಯ ಭವನ, ಕೃಷ್ಣ ಮಂದಿರ ವಠಾರ ಪಾಠಗಳಲ್ಲಿ ಶಿಕ್ಷಕರು ಪಾಠ ಮಾಡಿದ್ದರು. ಇದರಿಂದ ಈಗ ಪ್ರಾಥಮಿಕ ಸಂಪರ್ಕದಲ್ಲಿರುವ ಮಕ್ಕಳ ಪಾಲಕರಲ್ಲಿ ಆತಂಕ ಮನೆ ಮೂಡಿದೆ.</p>.<p><strong>ಜಿಲ್ಲೆಯಲ್ಲಿ 42 ಶಿಕ್ಷಕರಿಗೆ ಕೋವಿಡ್:</strong> ‘ಜಿಲ್ಲೆಯಲ್ಲಿ ಇದುವರೆಗೆ 42 ಶಿಕ್ಷಕರಿಗೆ ಕೋವಿಡ್ ದೃಢವಾಗಿದ್ದು, ಇದರಲ್ಲಿ ಮೂವರು ಮೃತಪಟ್ಟಿದ್ದಾರೆ. 39 ಶಿಕ್ಷಕರು ಗುಣಮುಖರಾಗಿದ್ದಾರೆ’ ಎಂದು ಡಿಡಿಪಿಐ ಶ್ರೀನಿವಾಸರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಜಿಲ್ಲೆಯಲ್ಲಿ ವಿವಿಧ ತಾಲ್ಲೂಕುಗಳಲ್ಲಿ 200ಕ್ಕೂ ಹೆಚ್ಚು ವಿದ್ಯಾಗಮ ವಠಾರ ಪಾಠ ನಡೆಯುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>