<p>ಯಾದಗಿರಿ: ಕೋವಿಡ್ 3ನೇ ಅಲೆ ಎದುರಿಸಲು ವಿವಿಧ ಸಂಘ– ಸಂಸ್ಥೆಗಳು ₹14 ಕೋಟಿ ಸಿಎಸ್ಆರ್ ಅನುದಾನವನ್ನು ಜಿಲ್ಲಾಡಳಿತಕ್ಕೆ ನೀಡಿವೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್, ತಿಳಿಸಿದರು.</p>.<p>ಜಿಲ್ಲೆಯು ನೀತಿ ಆಯೋಗದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿದ್ದು, ಕೋವಿಡ್ ಮೂರನೇ ಅಲೆಯನ್ನು ನಿಯಂತ್ರಿಸಲು ಅವಶ್ಯವಿರುವ ವೈದ್ಯಕಿಯ ಉಪಕರಣಗಳನ್ನು ಈಗಾಗಲೇ ಟೆಂಡರ್ ಮೂಲಕ ಖರೀದಿಸಲಾಗಿದೆ ಎಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚುವರಿ ಆಮ್ಲಜನಕ ಪೈಪ್ಲೈನ್ ಮತ್ತು ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹುಡ್ಕೋ ಸಂಸ್ಥೆ ಮುಂದೆ ಬಂದಿದೆ. ಜಿಲ್ಲಾ ಆಸ್ಪತ್ರೆ, ದೋರನಹಳ್ಳಿ, ಶಹಾಪುರ, ಹುಣಸಗಿ ಸಮುದಾಯ ಆರೋಗ್ಯ ಕೇಂದ್ರ, ಸುರಪುರ ನಗರ ಆರೋಗ್ಯ ಕೇಂದ್ರಗಳಲ್ಲಿ ಸುಮಾರು ₹2 ಕೋಟಿ ವೆಚ್ಚದಲ್ಲಿ ಈ ಯೋಜನೆ ಜಾರಿಗೆ ಬರಲಿದ್ದು, ಸಿಎಸ್ಆರ್ ಅನುಮೋದನೆಗಾಗಿ ಕಾಯಲಾಗುತ್ತಿದೆ. ಸುಮಾರು 250 ಹಾಸಿಗೆಗಳನ್ನು ಹೊಸದಾಗಿ ಕಾರ್ಯ ರೂಪಕ್ಕೆ ಬರಲಿದೆ ಎಂದು ತಿಳಿಸಿದರು.</p>.<p>ಆರ್ಇಸಿ ಫೌಂಡೇಷನ್ ವತಿಯಿಂದ ಜಿಲ್ಲಾ ಹೊಸ ಆಸ್ಪತ್ರೆಯಲ್ಲಿ ₹ 2.22 ಕೋಟಿ ವೆಚ್ಚದಲ್ಲಿ ಸಿಟಿ ಸ್ಕ್ಯಾನ್ ಘಟಕ ಸ್ಥಾಪನೆಗೆ ಟೆಂಡರ್ ಕರೆಯಲಾಗಿದೆ ಎಂದರು.</p>.<p>ಗಿವ್ ಇಂಡಿಯಾ ಫೌಂಡೇಷನ್ ಮೂಲಕ ಸುರಪುರ, ಹುಣಸಗಿ, ಗುರುಮಠಕಲ್, ಶಹಾಪುರ ತಾಲ್ಲೂಕಾಸ್ಪತ್ರೆಯಲ್ಲಿ ತಲಾ ₹75 ಲಕ್ಷ ವೆಚ್ಚದಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದಕ ಸ್ಥಾವರ ಸ್ಥಾಪನೆಗೆ ಸಿಎಸ್ಆರ್ ಪಾಲುದಾರರ ಅನುಮೋದನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.<br /><br />ಇದಲ್ಲದೆ ವಿವಿಧ ಸಂಸ್ಥೆಗಳ ಮೂಲಕ ₹12 ಕೋಟಿ ಕೋವಿಡ್ಗೆ ಸಂಬಂಧಿಸಿದ ಉಪಕರಣ, ₹2 ಕೋಟಿ ಕೋವಿಡೇತರ ಉಪಕರಣ ಖರೀದಿಗೆ ಅನುಮೋದಿಸಲಾಗಿದೆ. ಒಂದು ತಿಂಗಳಲ್ಲಿ ಈ ಎಲ್ಲ ಉಪಕರಣ ಅಳವಡಿಸಲಾಗುತ್ತಿದೆ ಎಂದರು.</p>.<p>ಜಿಲ್ಲೆಯಲ್ಲಿ ನದಿಯಂಚಿನಲ್ಲಿರುವ 9 ಗ್ರಾಮಗಳ ಸ್ಥಳಾಂತರಕ್ಕೆ ₹288 ಕೋಟಿ ಪ್ರಸ್ತಾವಣೆ ಸಲ್ಲಿಸಲಾಗಿದೆ. ಇದು ಯುಕೆಪಿ–3 ಯೋಜನೆಯಡಿ ಸೇರಿಸುವಂತೆ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಮಾಡಲಾಗಿದೆ ಎಂದರು.</p>.<p>ಜಿಲ್ಲೆಯಲ್ಲಿ 8 ಚೆಕ್ ಪೋಸ್ಟ್ಗಳಲ್ಲಿ ಪೊಲೀಸ್, ಕಂದಾಯ, ಆರೋಗ್ಯ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು. ಕಟ್ಟುನಿಟ್ಟಾಗಿ ಮಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಲಾಗುವುದು ಎಂದರು.</p>.<p>ಪ್ರವಾಹದಿಂದ 3,300 ಹೆಕ್ಟೇರ್ ಪ್ರದೇಶ ಹಾಳಾಗಿದೆ. ನದಿಯಂಚಿನ ಜಮೀನುಗಳಲ್ಲಿ ನೀರು ನುಗ್ಗಿದೆ. ವಡಗೇರಾದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಯವರು ತ್ಯಾಜ್ಯವನ್ನು ಹಳ್ಳಕೊಳ್ಳಗಳಿಗೆ ಹರಿಬಿಟ್ಟರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಆರ್ಸಿಎಚ್ ಡಾ.ಲಕ್ಷ್ಮಿಕಾಂತ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಜೀವಕುಮಾರ ರಾಯಚೂರುಕರ್ ಇದ್ದರು.</p>.<p>***</p>.<p>ಶಹಾಪುರ ತಾಲ್ಲೂಕಿನ ಕೊಳ್ಳೂರು (ಎಂ) ಸೇತುವೆ ಎತ್ತರಿಸಲು ₹150 ಕೋಟಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ. ಯೋಜನೆ ಜಾರಿಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ<br />ಆರ್.ರಾಗಪ್ರಿಯಾ, ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ಕೋವಿಡ್ 3ನೇ ಅಲೆ ಎದುರಿಸಲು ವಿವಿಧ ಸಂಘ– ಸಂಸ್ಥೆಗಳು ₹14 ಕೋಟಿ ಸಿಎಸ್ಆರ್ ಅನುದಾನವನ್ನು ಜಿಲ್ಲಾಡಳಿತಕ್ಕೆ ನೀಡಿವೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್, ತಿಳಿಸಿದರು.</p>.<p>ಜಿಲ್ಲೆಯು ನೀತಿ ಆಯೋಗದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿದ್ದು, ಕೋವಿಡ್ ಮೂರನೇ ಅಲೆಯನ್ನು ನಿಯಂತ್ರಿಸಲು ಅವಶ್ಯವಿರುವ ವೈದ್ಯಕಿಯ ಉಪಕರಣಗಳನ್ನು ಈಗಾಗಲೇ ಟೆಂಡರ್ ಮೂಲಕ ಖರೀದಿಸಲಾಗಿದೆ ಎಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚುವರಿ ಆಮ್ಲಜನಕ ಪೈಪ್ಲೈನ್ ಮತ್ತು ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹುಡ್ಕೋ ಸಂಸ್ಥೆ ಮುಂದೆ ಬಂದಿದೆ. ಜಿಲ್ಲಾ ಆಸ್ಪತ್ರೆ, ದೋರನಹಳ್ಳಿ, ಶಹಾಪುರ, ಹುಣಸಗಿ ಸಮುದಾಯ ಆರೋಗ್ಯ ಕೇಂದ್ರ, ಸುರಪುರ ನಗರ ಆರೋಗ್ಯ ಕೇಂದ್ರಗಳಲ್ಲಿ ಸುಮಾರು ₹2 ಕೋಟಿ ವೆಚ್ಚದಲ್ಲಿ ಈ ಯೋಜನೆ ಜಾರಿಗೆ ಬರಲಿದ್ದು, ಸಿಎಸ್ಆರ್ ಅನುಮೋದನೆಗಾಗಿ ಕಾಯಲಾಗುತ್ತಿದೆ. ಸುಮಾರು 250 ಹಾಸಿಗೆಗಳನ್ನು ಹೊಸದಾಗಿ ಕಾರ್ಯ ರೂಪಕ್ಕೆ ಬರಲಿದೆ ಎಂದು ತಿಳಿಸಿದರು.</p>.<p>ಆರ್ಇಸಿ ಫೌಂಡೇಷನ್ ವತಿಯಿಂದ ಜಿಲ್ಲಾ ಹೊಸ ಆಸ್ಪತ್ರೆಯಲ್ಲಿ ₹ 2.22 ಕೋಟಿ ವೆಚ್ಚದಲ್ಲಿ ಸಿಟಿ ಸ್ಕ್ಯಾನ್ ಘಟಕ ಸ್ಥಾಪನೆಗೆ ಟೆಂಡರ್ ಕರೆಯಲಾಗಿದೆ ಎಂದರು.</p>.<p>ಗಿವ್ ಇಂಡಿಯಾ ಫೌಂಡೇಷನ್ ಮೂಲಕ ಸುರಪುರ, ಹುಣಸಗಿ, ಗುರುಮಠಕಲ್, ಶಹಾಪುರ ತಾಲ್ಲೂಕಾಸ್ಪತ್ರೆಯಲ್ಲಿ ತಲಾ ₹75 ಲಕ್ಷ ವೆಚ್ಚದಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದಕ ಸ್ಥಾವರ ಸ್ಥಾಪನೆಗೆ ಸಿಎಸ್ಆರ್ ಪಾಲುದಾರರ ಅನುಮೋದನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.<br /><br />ಇದಲ್ಲದೆ ವಿವಿಧ ಸಂಸ್ಥೆಗಳ ಮೂಲಕ ₹12 ಕೋಟಿ ಕೋವಿಡ್ಗೆ ಸಂಬಂಧಿಸಿದ ಉಪಕರಣ, ₹2 ಕೋಟಿ ಕೋವಿಡೇತರ ಉಪಕರಣ ಖರೀದಿಗೆ ಅನುಮೋದಿಸಲಾಗಿದೆ. ಒಂದು ತಿಂಗಳಲ್ಲಿ ಈ ಎಲ್ಲ ಉಪಕರಣ ಅಳವಡಿಸಲಾಗುತ್ತಿದೆ ಎಂದರು.</p>.<p>ಜಿಲ್ಲೆಯಲ್ಲಿ ನದಿಯಂಚಿನಲ್ಲಿರುವ 9 ಗ್ರಾಮಗಳ ಸ್ಥಳಾಂತರಕ್ಕೆ ₹288 ಕೋಟಿ ಪ್ರಸ್ತಾವಣೆ ಸಲ್ಲಿಸಲಾಗಿದೆ. ಇದು ಯುಕೆಪಿ–3 ಯೋಜನೆಯಡಿ ಸೇರಿಸುವಂತೆ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಮಾಡಲಾಗಿದೆ ಎಂದರು.</p>.<p>ಜಿಲ್ಲೆಯಲ್ಲಿ 8 ಚೆಕ್ ಪೋಸ್ಟ್ಗಳಲ್ಲಿ ಪೊಲೀಸ್, ಕಂದಾಯ, ಆರೋಗ್ಯ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು. ಕಟ್ಟುನಿಟ್ಟಾಗಿ ಮಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಲಾಗುವುದು ಎಂದರು.</p>.<p>ಪ್ರವಾಹದಿಂದ 3,300 ಹೆಕ್ಟೇರ್ ಪ್ರದೇಶ ಹಾಳಾಗಿದೆ. ನದಿಯಂಚಿನ ಜಮೀನುಗಳಲ್ಲಿ ನೀರು ನುಗ್ಗಿದೆ. ವಡಗೇರಾದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಯವರು ತ್ಯಾಜ್ಯವನ್ನು ಹಳ್ಳಕೊಳ್ಳಗಳಿಗೆ ಹರಿಬಿಟ್ಟರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಆರ್ಸಿಎಚ್ ಡಾ.ಲಕ್ಷ್ಮಿಕಾಂತ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಜೀವಕುಮಾರ ರಾಯಚೂರುಕರ್ ಇದ್ದರು.</p>.<p>***</p>.<p>ಶಹಾಪುರ ತಾಲ್ಲೂಕಿನ ಕೊಳ್ಳೂರು (ಎಂ) ಸೇತುವೆ ಎತ್ತರಿಸಲು ₹150 ಕೋಟಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ. ಯೋಜನೆ ಜಾರಿಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ<br />ಆರ್.ರಾಗಪ್ರಿಯಾ, ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>