2.50 ಲಕ್ಷ ಕ್ಯುಸೆಕ್ ಬಂದರೆ ಸೇತುವೆ ಮುಳುಗಡೆ: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 2.50 ಲಕ್ಷ ಕ್ಯುಸೆಕ್ ನೀರು ಹರಿಸಿದರೆ, ಶಹಾಪುರ ತಾಲ್ಲೂಕಿನ ಕೊಳ್ಳೂರು (ಎಂ) ಸೇತುವೆ ಮುಳುಗಡೆಯಾಗಲಿದೆ. ಇದರಿಂದ ಯಾದಗಿರಿ, ರಾಯಚೂರು, ಕಲಬುರಗಿ ಮಾರ್ಗ ಬಂದ್ ಆಗಲಿದೆ. ತಿಂಥಣಿ ಸೇತುವೆ ಮೂಲಕ ಸುತ್ತುವರೆದು ಬರಬೇಕಾಗುತ್ತದೆ. ನದಿ ಪಾತ್ರದಲ್ಲಿ ಭತ್ತ, ಹತ್ತಿ ಬೆಳೆಯಲಾಗಿದ್ದು, ಮುಳಗಡೆ ಆತಂಕ ಕಾಡುತ್ತಿದೆ.