ಭಾನುವಾರ ಬೆಳಿಗ್ಗೆ 80 ಸಾವಿರ ಕ್ಯುಸೆಕ್ ನೀರು ಒಳಹರಿವು ಇದ್ದು, 71 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿತ್ತು. ಆದರೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಬರುತ್ತಿದೆ ಎಂಬ ಮಾಹಿತಿ ಹಿರಿಯ ಅಧಿಕಾರಿಗಳಿಗೆ ಈ ಮೊದಲೇ ಲಭ್ಯವಾಗಿತ್ತು. ಅದರಂತೆ ಸಂಜೆ ಹೊತ್ತಿಗೆ 1.90 ಲಕ್ಷ ಕ್ಯುಸೆಕ್ ಒಳಹರಿವು ಬರುತ್ತಿದ್ದರಿಂದಾಗಿ ಜಲಾಶಯದ ಮಟ್ಟ 491 ಮೀಟರ್ ಕಾಯ್ದುಕೊಂಡು 22 ಗೇಟ್ಗಳ ಮೂಲಕ 2.37 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಇದರಿಂದಾಗಿ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ನದಿ ತೀರ ಗ್ರಾಮಗಳ ಹಳ್ಳಿಗಳ ಜಮೀನುಗಳಿಗೆ ನೀರು ನುಗ್ಗುವ ಸಾಧ್ಯತೆ ಹೆಚ್ಚಾಗಿದೆ.