<p><strong>ಶಹಾಪುರ:</strong> ವಿದ್ಯುತ್ ನಿಲುಗಡೆ ಮಾಡುವಾಗ ಲೈನ್ಮ್ಯಾನ್(ಮಾರ್ಗದಾಳು) ಮೇಲೆ ಹಲ್ಲೆ ನಡೆಸಿದ ಆರೋಪ ಸಾಬೀತು ಆಗಿದ್ದರಿಂದ ಮಂಗಳವಾರ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ಅವರು, ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ ₹ 6 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.</p>.<p>ಶಹಾಪುರ ತಾಲ್ಲೂಕಿನ ಗೋಗಿ(ಕೆ) ಗ್ರಾಮದ ಶಾಂತಪ್ಪ ಶರಣಪ್ಪ ಸೀತ್ನಿ ಶಿಕ್ಷೆಗೆ ಒಳಗಾದ ಅಪರಾಧಿ.</p>.<p><strong>ಏನಿದು ಪ್ರಕರಣ:</strong> ಜೆಸ್ಕಾಂನ ಗೋಗಿ ಶಾಖೆಯಲ್ಲಿ ಲೈನ್ಮ್ಯಾನ್ ಬೀರಲಿಂಗ ಎಂಬುವರು, 2023 ಸೆಪ್ಟಂಬರ್ 11ರಂದು ತಾಲ್ಲೂಕಿನ ಗೋಗಿ(ಕೆ) ಗ್ರಾಮದಲ್ಲಿ ಕಾರ್ಯನಿರ್ವಹಿಸುವಾಗಿ ಶಾಂತಪ್ಪ ಶರಣಪ್ಪ ಸೀತ್ನಿ ಅವರು ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಬೀರಲಿಂಗ ಅವರು ಗೋಗಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. </p>.<p>ನ್ಯಾಯಾಲಯಕ್ಕೆ ಗೋಗಿ ಠಾಣೆಯ ಪಿಎಸ್ಐ ದೇವೇಂದ್ರರಡ್ಡಿ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ದೂರುದಾರರ ಪರವಾಗಿ ಎಪಿಪಿ ಮರೆಪ್ಪ ಹೊಸಮನಿ ಹಳಿಸಗರ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ:</strong> ವಿದ್ಯುತ್ ನಿಲುಗಡೆ ಮಾಡುವಾಗ ಲೈನ್ಮ್ಯಾನ್(ಮಾರ್ಗದಾಳು) ಮೇಲೆ ಹಲ್ಲೆ ನಡೆಸಿದ ಆರೋಪ ಸಾಬೀತು ಆಗಿದ್ದರಿಂದ ಮಂಗಳವಾರ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ಅವರು, ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ ₹ 6 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.</p>.<p>ಶಹಾಪುರ ತಾಲ್ಲೂಕಿನ ಗೋಗಿ(ಕೆ) ಗ್ರಾಮದ ಶಾಂತಪ್ಪ ಶರಣಪ್ಪ ಸೀತ್ನಿ ಶಿಕ್ಷೆಗೆ ಒಳಗಾದ ಅಪರಾಧಿ.</p>.<p><strong>ಏನಿದು ಪ್ರಕರಣ:</strong> ಜೆಸ್ಕಾಂನ ಗೋಗಿ ಶಾಖೆಯಲ್ಲಿ ಲೈನ್ಮ್ಯಾನ್ ಬೀರಲಿಂಗ ಎಂಬುವರು, 2023 ಸೆಪ್ಟಂಬರ್ 11ರಂದು ತಾಲ್ಲೂಕಿನ ಗೋಗಿ(ಕೆ) ಗ್ರಾಮದಲ್ಲಿ ಕಾರ್ಯನಿರ್ವಹಿಸುವಾಗಿ ಶಾಂತಪ್ಪ ಶರಣಪ್ಪ ಸೀತ್ನಿ ಅವರು ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಬೀರಲಿಂಗ ಅವರು ಗೋಗಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. </p>.<p>ನ್ಯಾಯಾಲಯಕ್ಕೆ ಗೋಗಿ ಠಾಣೆಯ ಪಿಎಸ್ಐ ದೇವೇಂದ್ರರಡ್ಡಿ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ದೂರುದಾರರ ಪರವಾಗಿ ಎಪಿಪಿ ಮರೆಪ್ಪ ಹೊಸಮನಿ ಹಳಿಸಗರ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>