‘ಮಾರ್ಚ್ 25ವರೆಗೆ ಮಾತ್ರ ನೀರು ಹರಿಸಲು ತೀರ್ಮಾಸಿತ್ತು. ಆದರೆ ಬೇಸಿಗೆ ಹಂಗಾಮಿನ ಬೆಳೆಗಳು ಕಾಳು ಕಟ್ಟುವ ಹಂತದಲ್ಲಿ ಇವೆ. ತಕ್ಷಣ ನೀರು ಸ್ಥಗಿತಗೊಂಡರೆ ಕೋಟ್ಯಂತರ ಮೌಲ್ಯದ ಬೆಳೆ ಹಾನಿಯಾಗುವುದರ ಜತೆಯಲ್ಲಿ ರೈತರು ಸಂಕಷ್ಟದಲ್ಲಿ ಸಿಲುಕುತ್ತಾರೆ. ಕೊನೆ ಪಕ್ಷ ಏಪ್ರಿಲ್ 1ವರೆಗೆ ನೀರು ಹರಿಸುವಂತೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ.ತಿಮ್ಮಾಪೂರ ಅವರಿಗೆ ಮನವಿ ಮಾಡಲಾಯಿತು. ಕೊನೆಗೆ ನೀರಿನ ಲಭ್ಯತೆಯನ್ನು ನೋಡಿ ಮಾರ್ಚ್ 31ವರೆಗೆ ನೀರು ಹರಿಸಲು ನಿರ್ಧರಿಸಲಾಯಿತು’ ಎಂದು ಹೇಳಿದರು.