ಪ್ರತಿ ಕ್ವಿಂಟಲ್ ತೊಗರಿಗೆ ಸರ್ಕಾರದ ಬೆಂಬಲ ಬೆಲೆ ₹ 6,100 ಇದ್ದು, ಪ್ರತಿಯೊಬ್ಬ ರೈತರಿಂದ ಎಕರೆಗೆ 5 ಕ್ವಿಂಟಲ್ನಂತೆ ಗರಿಷ್ಠ 10 ಕ್ವಿಂಟಲ್ ಖರೀದಿಸಲಾಗುವುದು. ಜಿಲ್ಲೆಯಲ್ಲಿ ಯಾದಗಿರಿ, ರಾಮಸಮುದ್ರ, ಸೈದಾಪುರ, ಗುರುಮಠಕಲ್, ಕೊಂಕಲ್, ಚಪೇಟ್ಲಾ, ಗಣಪುರ, ಹತ್ತಿಕುಣಿ, ಅಲ್ಲಿಪುರ, ಯಲ್ಹೇರಿ, ಅನಪುರ, ಯರಗೋಳ, ಪುಟಪಾಕ್, ಶಹಾಪುರ, ರಸ್ತಾಪುರ, ಬೆಂಡೆಬೆಂಬಳಿ, ಗಂಗನಾಳ, ಚಾಮನಾಳ, ಹೈಯಾಳ, ದೋರನಹಳ್ಳಿ, ಶಿರವಾಳ, ಟೊಕಾಪುರ, ಹೊಸಕೇರಾ, ಮದ್ರಿಕಿ, ಸುರಪುರ, ಏವೂರು, ಯಾಳಗಿ, ಕಕ್ಕೇರಾ, ಕೊಡೇಕಲ್, ನಗನೂರು, ಮಾಲಗತ್ತಿ, ರಾಜನಕೋಳೂರು, ಹುಣಸಗಿ ಮತ್ತು ಕೆಂಭಾವಿ-2ರಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.