<p><strong>ಯಾದಗಿರಿ: </strong>ಹೈದರಾಬಾದ್ ಕರ್ನಾಟಕ ಭಾಗಕ್ಕೆ 371 (ಜೆ) ಜಾರಿಗೆ ತರಲು ಹೋರಾಡಿದ ಮಾಜಿ ಸಚಿವ ವೈಜನಾಥ ಪಾಟೀಲರು 371 (ಜೆ) ಜನಕ ಎಂದು ಹಿರಿಯ ಸಾಹಿತಿ ಅಯ್ಯಣ್ಣ ಹುಂಡೇಕರ್ ಬಣ್ಣಿಸಿದರು.</p>.<p>ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಆಂಧ್ರ, ಮಹಾರಾಷ್ಟ್ರಕ್ಕೆ ತೆರಳಿ 371 (ಜೆ) ಬಗ್ಗೆ ಅಧ್ಯಯನ ಮಾಡಿ ಹೋರಾಟಕ್ಕಿಳಿದರು. ಅವರ ಶ್ರಮದಿಂದ ಈಗ ಈ ಭಾಗಕ್ಕೆ ಮೀಸಲಾತಿ ಸಿಕ್ಕಿದೆ. ಹೀಗಾಗಿ ಅವರ ಹೋರಾಟ ಎಲ್ಲರಿಗೂಪ್ರೇರೇಪಣೆ ಎಂದರು.</p>.<p>ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪನೆ ತಡವಾಗಿದ್ದಕ್ಕೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದರು. ಹೀಗಾಗಿ ಈ ಭಾಗದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದರು.ರಾಜಿ ಪ್ರಶ್ನೆಯೇ ಇಲ್ಲದೇ ಹೋರಾಟ ಮಾಡಿದ ವೈಜನಾಥ ಪಾಟೀಲರಂತಹನಾಯಕನ ಅಗಲಿಕೆ ನಾಡಿಗೆ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ ಎಂದು ನುಡಿದರು.</p>.<p>ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ಮಾತನಾಡಿ, ವೈಜನಾಥ ಪಾಟೀಲರು ಹೋರಾಟದಿಂದ ಈ ಭಾಗಕ್ಕೆ ಪರಿಚಿತವಾದವರು. ಅವರು ಮಾಡಿದ ಹೋರಾಟದ ಫಲ ಈಗ ಕಾಣುತ್ತಿದೆ. ಹೋರಾಟವನ್ನೆ ಉಸಿರಾಗಿಸಿಕೊಂಡಿದ್ದ ಪಾಟೀಲರು ತಮ್ಮ ಬೇಡಿಕೆ ಈಡೇರದಿದ್ದರೆ ರಾಜೀನಾಮೆ ನೀಡಿ ಹೊರಬರುತ್ತಿದ್ದರು. ಅವರು ನಮ್ಮ ತಂದೆಯ ಒಡನಾಡಿಯಾಗಿದ್ದರು ಎಂದು ಸ್ಮರಿಸಿದರು.</p>.<p>ಪಾಟೀಲರ ಒಡನಾಡಿ ಗುಂಡೂರಾವ್ ಪಂಚಾಯಿತಿ,ಸರ್ಕಾರಿ ಪದವಿ ಕಾಲೇಜು ಪ್ರಾಚಾರ್ಯ ಡಾ.ಶುಭಾಷಚಂದ್ರ ಕೌಲಗಿ, ಜೆಡಿಎಸ್ ನಗರದ ಘಟಕದ ಅಧ್ಯಕ್ಷ ವಿಶ್ವನಾಥ ಸಿರವಾರ ಮಾತನಾಡಿದರು.</p>.<p>ಖಂಡಪ್ಪ ದಾಸನ್, ಮಹಾದೇವಪ್ಪ ಅಬ್ಬೆತುಮಕೂರು, ಸಿದ್ದಪ್ಪ ಹೊಟ್ಟಿ, ಸುರೇಶ ಆಕಳ,ವಿಲಾಸ ಪಾಟೀಲ ಸೇರಿದಂತೆ ಅಪಾರ ಅಭಿಮಾನಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಹೈದರಾಬಾದ್ ಕರ್ನಾಟಕ ಭಾಗಕ್ಕೆ 371 (ಜೆ) ಜಾರಿಗೆ ತರಲು ಹೋರಾಡಿದ ಮಾಜಿ ಸಚಿವ ವೈಜನಾಥ ಪಾಟೀಲರು 371 (ಜೆ) ಜನಕ ಎಂದು ಹಿರಿಯ ಸಾಹಿತಿ ಅಯ್ಯಣ್ಣ ಹುಂಡೇಕರ್ ಬಣ್ಣಿಸಿದರು.</p>.<p>ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಆಂಧ್ರ, ಮಹಾರಾಷ್ಟ್ರಕ್ಕೆ ತೆರಳಿ 371 (ಜೆ) ಬಗ್ಗೆ ಅಧ್ಯಯನ ಮಾಡಿ ಹೋರಾಟಕ್ಕಿಳಿದರು. ಅವರ ಶ್ರಮದಿಂದ ಈಗ ಈ ಭಾಗಕ್ಕೆ ಮೀಸಲಾತಿ ಸಿಕ್ಕಿದೆ. ಹೀಗಾಗಿ ಅವರ ಹೋರಾಟ ಎಲ್ಲರಿಗೂಪ್ರೇರೇಪಣೆ ಎಂದರು.</p>.<p>ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪನೆ ತಡವಾಗಿದ್ದಕ್ಕೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದರು. ಹೀಗಾಗಿ ಈ ಭಾಗದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದರು.ರಾಜಿ ಪ್ರಶ್ನೆಯೇ ಇಲ್ಲದೇ ಹೋರಾಟ ಮಾಡಿದ ವೈಜನಾಥ ಪಾಟೀಲರಂತಹನಾಯಕನ ಅಗಲಿಕೆ ನಾಡಿಗೆ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ ಎಂದು ನುಡಿದರು.</p>.<p>ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ಮಾತನಾಡಿ, ವೈಜನಾಥ ಪಾಟೀಲರು ಹೋರಾಟದಿಂದ ಈ ಭಾಗಕ್ಕೆ ಪರಿಚಿತವಾದವರು. ಅವರು ಮಾಡಿದ ಹೋರಾಟದ ಫಲ ಈಗ ಕಾಣುತ್ತಿದೆ. ಹೋರಾಟವನ್ನೆ ಉಸಿರಾಗಿಸಿಕೊಂಡಿದ್ದ ಪಾಟೀಲರು ತಮ್ಮ ಬೇಡಿಕೆ ಈಡೇರದಿದ್ದರೆ ರಾಜೀನಾಮೆ ನೀಡಿ ಹೊರಬರುತ್ತಿದ್ದರು. ಅವರು ನಮ್ಮ ತಂದೆಯ ಒಡನಾಡಿಯಾಗಿದ್ದರು ಎಂದು ಸ್ಮರಿಸಿದರು.</p>.<p>ಪಾಟೀಲರ ಒಡನಾಡಿ ಗುಂಡೂರಾವ್ ಪಂಚಾಯಿತಿ,ಸರ್ಕಾರಿ ಪದವಿ ಕಾಲೇಜು ಪ್ರಾಚಾರ್ಯ ಡಾ.ಶುಭಾಷಚಂದ್ರ ಕೌಲಗಿ, ಜೆಡಿಎಸ್ ನಗರದ ಘಟಕದ ಅಧ್ಯಕ್ಷ ವಿಶ್ವನಾಥ ಸಿರವಾರ ಮಾತನಾಡಿದರು.</p>.<p>ಖಂಡಪ್ಪ ದಾಸನ್, ಮಹಾದೇವಪ್ಪ ಅಬ್ಬೆತುಮಕೂರು, ಸಿದ್ದಪ್ಪ ಹೊಟ್ಟಿ, ಸುರೇಶ ಆಕಳ,ವಿಲಾಸ ಪಾಟೀಲ ಸೇರಿದಂತೆ ಅಪಾರ ಅಭಿಮಾನಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>