ಜಿಲ್ಲೆಯಲ್ಲಿ ಪೂರ್ವ ಮುಂಗಾರಿನ ಉತ್ತಮ ಮಳೆಯಾಗುತ್ತಿದ್ದು ರೈತರಿಗೆ ಬೇಕಾದ ಬೀಜ ಗೊಬ್ಬರಕ್ಕೆ ಯಾವುದೇ ಸಮಸ್ಯೆಯಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು. ಅಲ್ಲದೇ ಮಳೆಯಾಶ್ರಿತ ನೀರಾವರಿಗೆ ಬೇಕಾದ ಯೂರಿಯಾ ಡಿಎಪಿ ಕಾಂಪ್ಲೆಕ್ಸ್ ಗೊಬ್ಬರ ಹತ್ತಿ ಬೀಜ ನಕಲಿ ಹಾವಳಿ ತಡೆಯವಲ್ಲಿ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕುಅಶೋಕ ಮಲ್ಲಾಬಾದಿ ರಾಜ್ಯ ಕೃಷಿ ಪ್ರಶಸ್ತಿ ಪುರಸ್ಕೃತ ರೈತ
ರೈತರು ಅಧಿಕೃತ ಮಾರಾಟಗಾರರಲ್ಲಿ ಮಾತ್ರ ಬಿತ್ತನೆ ಬೀಜ ಖರೀದಿಸಿ ಕಡ್ಡಾಯವಾಗಿ ರಸೀದಿ ಪಡೆಯಬೇಕು. ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಕೃಷಿ ಬಗ್ಗೆ ಮಾಹಿತಿ ಪಡೆಯಬೇಕುಭೀಮರಾಯ ಹವಾಲ್ದಾರ ಸಹಾಯಕ ಕೃಷಿ ನಿರ್ದೇಶಕ
ಕಳೆದ ವರ್ಷ ಬರಗಾಲದಿಂದ ರೈತ ಸಂಕಷ್ಟ ಎದುರಿಸಿದ್ದಾನೆ. ಅದೃಷ್ಟಕ್ಕೆ ಮಳೆ ಬರುತ್ತಿದೆ. ಕೃಷಿ ಇಲಾಖೆ ಸರಿಯಾದ ಸಮಯಕ್ಕೆ ರೈತನ ನೆರವಿಗೆ ಬರಬೇಕುವಿಶ್ವರಾಜ ಒಂಟೂರ ರೈತ ಚಂದಲಾಪುರ
ಕೃಷಿ ಇಲಾಖೆ ಮುಂಗಾರು ಅವಧಿಗೆ ಸನ್ನದ್ಧವಾಗಿದೆ. ರೈತರು ಅಧಿಕೃತ ಮಾರಾಟಗಾರರಿಂದ ಮಾತ್ರ ಬೀಜ ಖರೀದಿಸಿ ರಸೀದಿ ಪಡೆಯಬೇಕುಮಲ್ಲಿಕಾರ್ಜುನ ವಾರದ ಕೃಷಿ ಅಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.