ಶಹಾಪುರ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಕೊಳ್ಳೂರು ಬಳಿ ಬುಧವಾರ ಬೆಳಿಗ್ಗೆ ಟಂಟಂ ವಾಹನ ಮತ್ತು ಟ್ಯಾಂಕರ್ ಮಧ್ಯೆ ಡಿಕ್ಕಿ ಸಂಭವಿಸಿ, ಐವರು ಮಹಿಳಾ ಕೂಲಿಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಡಗೇರಾ ತಾಲ್ಲೂಕಿನ ಮುನಮುಟಗಿ ಗ್ರಾಮದ ದೇವೀಂದ್ರಮ್ಮ (57), ಅಯ್ಯಮ್ಮ (45), ಶರಣಮ್ಮ (35), ಉಮಾದೇವಿ (40) ಹಾಗೂ ಕಾಶೀಂಬಿ (55) ಮೃತರು. ಇವರು ಜಮೀನಿನ ಕೂಲಿಕೆಲಸಕ್ಕೆ ಟಂಟಂ ವಾಹನದಲ್ಲಿ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.