<p><strong>ಯಾದಗಿರಿ:</strong> ‘ಪ್ರತಿ ನೂತನ ತಾಲ್ಲೂಕುಗಳ ಅಭಿವೃದ್ಧಿಗೆ ಸರ್ಕಾರ ₹5 ಕೋಟಿ ಬಿಡುಗಡೆ ಮಾಡಿದ್ದು, ಅಭಿವೃದ್ಧಿ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ ಹೇಳಿದರು.</p>.<p>ಜಿಲ್ಲಾಡಳಿತ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕುಂದುಕೊರತೆ ಸಭೆಯಲ್ಲಿ ಅವರು ಮಾಹಿತಿ ನೀಡಿದರು.</p>.<p>‘ಗುರುಮಠಕಲ್, ಹುಣಸಗಿ ಹಾಗೂ ವಡಗೇರಾ ತಾಲ್ಲೂಕುಗಳಲ್ಲಿ ವಿವಿಧ ಇಲಾಖೆ ಕಚೇರಿಗಳ ಸ್ಥಾಪಿಸಲು ಸ್ಥಳಾವಕಾಶ ಹಾಗೂ ಕಟ್ಟಡಗಳನ್ನು ಬಾಡಿಗೆ ರೂಪದಲ್ಲಿ ಪಡೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗುರುಮಠಕಲ್ ತಾಲ್ಲೂಕಿಗೆ ಅಜಲಾಪುರ ಗ್ರಾಮ ಪಂಚಾಯಿತಿಗೆ ಸೇರಿದ ಬದ್ದೆಪ್ಪಲ್ಲಿ ಗ್ರಾಮವನ್ನು, ವಡಗೇರಾ ತಾಲ್ಲೂಕಿಗೆ ಮಾಲಹಳ್ಳಿ, ಗಡ್ಡೆಸೂಗೂರು, ತೇಗರಾಳ, ಬಬಲಾದ ಗ್ರಾಮಗಳನ್ನು ಹಾಗೂ ಗೆದ್ದಲಮರಿ, ಬೈಲಕುಂಟಿ, ಕಾಮನಟಗಿ, ಕಚಕನೂರು, ಹೆಬ್ಬಾಳ-ಬಿ. ಗ್ರಾಮಗಳನ್ನು ನೂತನ ಹುಣಸಗಿ ತಾಲ್ಲೂಕಿಗೆ ಸೇರ್ಪಡೆ ಮಾಡುವ ಬಗ್ಗೆ ಚರ್ಚಿಸಿ ನಿರ್ಣಯಿಸಲಾಯಿತು.</p>.<p>ಶೆಡ್ಯೂಲ್ 112ರ ಪ್ರಕಾರ ಗ್ರಾಮಗಳ ಸೇರ್ಪಡೆ ಹಾಗೂ ಬದಲಾವಣೆ ಮಾಡಲಾಗುತ್ತಿದೆ. ನೂತನ ತಾಲ್ಲೂಕುಗಳಿಗೆ ಸೇರ್ಪಡೆ ಮಾಡಿದ ಗ್ರಾಮಗಳ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದರು.</p>.<p>**</p>.<p>ನೂತನ ತಾಲ್ಲೂಕು ಕೇಂದ್ರಗಳಲ್ಲಿ ಕಟ್ಟಡಗಳ ಕೊರತೆ ಉಂಟಾದರೆ ಬಾಡಿಗೆ ಕಟ್ಟಡಗಳನ್ನು ಪಡೆದು ಕಚೇರಿಗಳನ್ನು ತತಕ್ಷಣ ಆರಂಭಿಸಬೇಕು.<br /> <em><strong>-ಜೆ.ಮಂಜುನಾಥ<br /> ಜಿಲ್ಲಾಧಿಕಾರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ‘ಪ್ರತಿ ನೂತನ ತಾಲ್ಲೂಕುಗಳ ಅಭಿವೃದ್ಧಿಗೆ ಸರ್ಕಾರ ₹5 ಕೋಟಿ ಬಿಡುಗಡೆ ಮಾಡಿದ್ದು, ಅಭಿವೃದ್ಧಿ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ ಹೇಳಿದರು.</p>.<p>ಜಿಲ್ಲಾಡಳಿತ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕುಂದುಕೊರತೆ ಸಭೆಯಲ್ಲಿ ಅವರು ಮಾಹಿತಿ ನೀಡಿದರು.</p>.<p>‘ಗುರುಮಠಕಲ್, ಹುಣಸಗಿ ಹಾಗೂ ವಡಗೇರಾ ತಾಲ್ಲೂಕುಗಳಲ್ಲಿ ವಿವಿಧ ಇಲಾಖೆ ಕಚೇರಿಗಳ ಸ್ಥಾಪಿಸಲು ಸ್ಥಳಾವಕಾಶ ಹಾಗೂ ಕಟ್ಟಡಗಳನ್ನು ಬಾಡಿಗೆ ರೂಪದಲ್ಲಿ ಪಡೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗುರುಮಠಕಲ್ ತಾಲ್ಲೂಕಿಗೆ ಅಜಲಾಪುರ ಗ್ರಾಮ ಪಂಚಾಯಿತಿಗೆ ಸೇರಿದ ಬದ್ದೆಪ್ಪಲ್ಲಿ ಗ್ರಾಮವನ್ನು, ವಡಗೇರಾ ತಾಲ್ಲೂಕಿಗೆ ಮಾಲಹಳ್ಳಿ, ಗಡ್ಡೆಸೂಗೂರು, ತೇಗರಾಳ, ಬಬಲಾದ ಗ್ರಾಮಗಳನ್ನು ಹಾಗೂ ಗೆದ್ದಲಮರಿ, ಬೈಲಕುಂಟಿ, ಕಾಮನಟಗಿ, ಕಚಕನೂರು, ಹೆಬ್ಬಾಳ-ಬಿ. ಗ್ರಾಮಗಳನ್ನು ನೂತನ ಹುಣಸಗಿ ತಾಲ್ಲೂಕಿಗೆ ಸೇರ್ಪಡೆ ಮಾಡುವ ಬಗ್ಗೆ ಚರ್ಚಿಸಿ ನಿರ್ಣಯಿಸಲಾಯಿತು.</p>.<p>ಶೆಡ್ಯೂಲ್ 112ರ ಪ್ರಕಾರ ಗ್ರಾಮಗಳ ಸೇರ್ಪಡೆ ಹಾಗೂ ಬದಲಾವಣೆ ಮಾಡಲಾಗುತ್ತಿದೆ. ನೂತನ ತಾಲ್ಲೂಕುಗಳಿಗೆ ಸೇರ್ಪಡೆ ಮಾಡಿದ ಗ್ರಾಮಗಳ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದರು.</p>.<p>**</p>.<p>ನೂತನ ತಾಲ್ಲೂಕು ಕೇಂದ್ರಗಳಲ್ಲಿ ಕಟ್ಟಡಗಳ ಕೊರತೆ ಉಂಟಾದರೆ ಬಾಡಿಗೆ ಕಟ್ಟಡಗಳನ್ನು ಪಡೆದು ಕಚೇರಿಗಳನ್ನು ತತಕ್ಷಣ ಆರಂಭಿಸಬೇಕು.<br /> <em><strong>-ಜೆ.ಮಂಜುನಾಥ<br /> ಜಿಲ್ಲಾಧಿಕಾರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>