<p><strong>ಯಾದಗಿರಿ: </strong>ಪದವಿ ಪೂರ್ವ ಶಿಕ್ಷಣ ಇಲಾಖೆಜೂನ್ 18 ರಂದು ನಡೆಸುವದ್ವಿತೀಯ ಪಿಯು ಆಂಗ್ಲ ಭಾಷೆಯ ಪರೀಕ್ಷೆಗೆ ಬೇರೆ ಜಿಲ್ಲೆಯ 549 ಸೇರಿದಂತೆ 6,457 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.</p>.<p>ಲಾಕ್ಡೌನ್ ಕಾರಣಯಾದಗಿರಿಜಿಲ್ಲೆಯ ವಿದ್ಯಾರ್ಥಿಗಳು ತಾವು ವಿದ್ಯಾಭ್ಯಾಸ ಮಾಡಿದ ಕಾಲೇಜುಗಳಿಗೆ ತೆರಳಲು ಆಗದೆ ಇರುವುದರಿಂದ 548 ಅಂತರ ಜಿಲ್ಲೆಯವಿದ್ಯಾರ್ಥಿಗಳು, ಒಬ್ಬ ವಿದ್ಯಾರ್ಥಿನಿ ಮಾತ್ರ ಅಂತರ ರಾಜ್ಯದಿಂದ ಬಂದು ಪರೀಕ್ಷೆ ಬರೆಯಲಿದ್ದಾಳೆ.</p>.<p>‘ಯಾದಗಿರಿ ಜಿಲ್ಲೆಯ ವಿದ್ಯಾರ್ಥಿನಿ ಮಂಗಳೂರಿನಲ್ಲಿ 5 ವಿಷಯಗಳ ಪರೀಕ್ಷೆ ಮುಗಿದ ನಂತರ ಮುಂಬೈಗೆ ತೆರಳಿದ್ದಾಳೆ. ಈಗ ಬಾಕಿ ಇರುವ ಒಂದು ಪರೀಕ್ಷೆಯನ್ನುಜಿಲ್ಲೆಯಲ್ಲಿ ಬರೆಯಲು ಸರ್ಕಾರದಿಂದಅನುಮತಿ ತೆಗೆದುಕೊಂಡಿದ್ದಾಳೆ. ಹೀಗಾಗಿ ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ಡಿಡಿಪಿಯುಚಂದ್ರಕಾಂತ ಜಿ.ಹಿಳ್ಳಿ ಮಾಹಿತಿ ನೀಡಿದರು.</p>.<p>ಬೆಂಗಳೂರು, ಮಂಗಳೂರು, ಕಲಬುರ್ಗಿ, ಬೀದರ್, ರಾಯಚೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ಜಿಲ್ಲೆಯ ವಿದ್ಯಾರ್ಥಿಗಳು ಈಗಾಗಲೇ 5 ವಿಷಯಗಳ ಪರೀಕ್ಷೆ ಬರೆದಿದ್ದಾರೆ. ಆದರೆ, ಲಾಕ್ಡೌನ್ ಆಗಿದ್ದರಿಂದ ಮತ್ತೆ ಅಲ್ಲಿಗೆ ತೆರಳಲು ಆಗಿಲ್ಲ. ಹೀಗಾಗಿ ಸರ್ಕಾರವೇ ವಿದ್ಯಾರ್ಥಿಗಳು ಇದ್ದ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ. ಇದರಿಂದ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ 549 ವಿದ್ಯಾರ್ಥಿಗಳು ಇಂಗ್ಲಿಷ್ ಭಾಷೆಯ ಪರೀಕ್ಷೆ ಬರೆಯಲಿದ್ದಾರೆ.</p>.<p>ಮಾರ್ಚ್ 23ಕ್ಕೆ ಇಂಗ್ಲಿಷ್ ಭಾಷೆ ಪರೀಕ್ಷೆ ನಿಗದಿಯಾಗಿತ್ತು. ಅದಕ್ಕೂ ಮುಂಚೆ ಮಾರ್ಚ್ 22ರಂದು ಭಾರತ ಸಂಪೂರ್ಣ ಘೋಷಣೆ ಮಾಡಲಾಯಿತು. ಆನಂತರ ಮಾರ್ಚ್ 24ರಿಂದ ದೇಶದಲ್ಲಿ ಲಾಕ್ಡೌನ್ ಜಾರಿಗೆ ಬಂದಿದ್ದರಿಂದ ಪರೀಕ್ಷೆ ಮುಂದೂಡಲ್ಪಟ್ಟಿತು. ಈಗ ಜೂನ್ 18ಕ್ಕೆ ಪರೀಕ್ಷೆ ನಿಗದಿಯಾಗಿದೆ.</p>.<p><strong>ಅತಿ ಹೆಚ್ಚು ಸರ್ಕಾರಿ ಕಾಲೇಜಿನಲ್ಲಿ ಪರೀಕ್ಷೆ:</strong></p>.<p>ಮೊದಲು 5,908 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದರು. ಈಗ ಬೇರೆ ಜಿಲ್ಲೆಯ ವಿದ್ಯಾರ್ಥಿಗಳು ಸೇರಿ 6,457 ಪರೀಕ್ಷೆ ಬರೆಯಲಿದ್ದಾರೆ. ಅದರಲ್ಲಿ ಯಾದಗಿರಿಯ ಸರ್ಕಾರಿ ಪದವಿ ಪೂರ್ವ ಬಾಲಕ, ಬಾಲಕಿಯರ ಕಾಲೇಜಿನಲ್ಲಿಅತಿ ಹೆಚ್ಚುವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲಿದ್ದಾರೆ.</p>.<p>ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ 612, 238 ಬೇರೆ ಜಿಲ್ಲೆಯ ಕಾಲೇಜಿನ ವಿದ್ಯಾರ್ಥಿಗಳು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ506, 24 ಬೇರೆ ಜಿಲ್ಲೆಯ ಕಾಲೇಜಿನ ವಿದ್ಯಾರ್ಥಿಗಳು 54 ಕೋಣೆಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಅದರಂತೆನ್ಯೂ ಕನ್ನಡ ಪಿಯು ಕಾಲೇಜಿನ 223 ವಿದ್ಯಾರ್ಥಿಗಳು, 22 ಬೇರೆ ಜಿಲ್ಲೆಯ ವಿದ್ಯಾರ್ಥಿಗಳು, ಜವಾಹರ ಕಾಲೇಜಿನ 413 ಕಾಲೇಜಿನ ವಿದ್ಯಾರ್ಥಿಗಳು, 27 ಬೇರೆ ಕಾಲೇಜಿನ ವಿದ್ಯಾರ್ಥಿಗಳು 47 ಕೋಣೆಗಳಲ್ಲಿ ಪರೀಕ್ಷೆ ಬರೆಯಲಿದ್ದು,ಸಿದ್ಧತೆ ಮಾಡಲಾಗಿದೆ.</p>.<p><strong>13 ಕೇಂದ್ರಗಳನ್ನು ಕ್ವಾರಂಟೈನ್ಗೆ ಕೊಟ್ಟಿಲ್ಲ:</strong></p>.<p>ಜಿಲ್ಲೆಯಲ್ಲಿರುವ ಶಾಲಾ–ಕಾಲೇಜು, ವಸತಿ ನಿಲಯಗಳನ್ನು ಸಾಂಸ್ಥಿಕ ಕ್ವಾರಂಟೈನ್ಗಳಾಗಿ ಪರಿವರ್ತಿಸಲಾಗಿತ್ತು. ಆದರೆ, ಇಂಗ್ಲಿಷ್ ಭಾಷೆಯ ಪರೀಕ್ಷೆ ನಡೆಯುವ 13 ಕೇಂದ್ರಗಳನ್ನು ಸಾಂಸ್ಥಿಕ ಕ್ವಾರಂಟೈನ್ಗೆ ನೀಡಲಾಗಿಲ್ಲ. ಅಲ್ಲದೆ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷೆಗೂ ಮುಂಚೆ ಸ್ಯಾನಿಟೈಸ್ ಮಾಡಿಸಲಾಗುವುದು ಎಂದು ಚಂದ್ರಕಾಂತ ಹಿಳ್ಳಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<p>* ನಮ್ಮ ಜಿಲ್ಲೆಯವರಲ್ಲದೆ ಬೇರೆ ಜಿಲ್ಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರಿಂದ ಅಂತರ ಕಾಪಾಡಿಕೊಳ್ಳುವ ದೃಷ್ಟಿಯಿಂದ ಕೋಣೆಗಳ ಸಂಖ್ಯೆ ಹೆಚ್ಚಳ ಮಾಡಲಾಗಿದೆ</p>.<p><em><strong>–ಚಂದ್ರಕಾಂತ ಜಿ.ಹಿಳ್ಳಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ</strong></em></p>.<p>* ಥರ್ಮಲ್ ಸ್ಕ್ಯಾನಿಂಗ್, ಪೊಲೀಸ್ ಭದ್ರತೆ, ಸ್ಯಾನಿಟೈಸ್ ಮಾಡಲು ವಿವಿಧ ಇಲಾಖೆಗೆ ಪತ್ರ ಬರೆಯಲಾಗಿದೆ. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಎಲ್ಲ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ</p>.<p><em><strong>– ಪೂಜಾರಿ ಗಣಪತಿ, ಸರ್ಕಾರಿ ಬಾಲಕರ ಕಾಲೇಜು ಪ್ರಭಾರಿಪ್ರಾಂಶುಪಾಲ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಪದವಿ ಪೂರ್ವ ಶಿಕ್ಷಣ ಇಲಾಖೆಜೂನ್ 18 ರಂದು ನಡೆಸುವದ್ವಿತೀಯ ಪಿಯು ಆಂಗ್ಲ ಭಾಷೆಯ ಪರೀಕ್ಷೆಗೆ ಬೇರೆ ಜಿಲ್ಲೆಯ 549 ಸೇರಿದಂತೆ 6,457 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.</p>.<p>ಲಾಕ್ಡೌನ್ ಕಾರಣಯಾದಗಿರಿಜಿಲ್ಲೆಯ ವಿದ್ಯಾರ್ಥಿಗಳು ತಾವು ವಿದ್ಯಾಭ್ಯಾಸ ಮಾಡಿದ ಕಾಲೇಜುಗಳಿಗೆ ತೆರಳಲು ಆಗದೆ ಇರುವುದರಿಂದ 548 ಅಂತರ ಜಿಲ್ಲೆಯವಿದ್ಯಾರ್ಥಿಗಳು, ಒಬ್ಬ ವಿದ್ಯಾರ್ಥಿನಿ ಮಾತ್ರ ಅಂತರ ರಾಜ್ಯದಿಂದ ಬಂದು ಪರೀಕ್ಷೆ ಬರೆಯಲಿದ್ದಾಳೆ.</p>.<p>‘ಯಾದಗಿರಿ ಜಿಲ್ಲೆಯ ವಿದ್ಯಾರ್ಥಿನಿ ಮಂಗಳೂರಿನಲ್ಲಿ 5 ವಿಷಯಗಳ ಪರೀಕ್ಷೆ ಮುಗಿದ ನಂತರ ಮುಂಬೈಗೆ ತೆರಳಿದ್ದಾಳೆ. ಈಗ ಬಾಕಿ ಇರುವ ಒಂದು ಪರೀಕ್ಷೆಯನ್ನುಜಿಲ್ಲೆಯಲ್ಲಿ ಬರೆಯಲು ಸರ್ಕಾರದಿಂದಅನುಮತಿ ತೆಗೆದುಕೊಂಡಿದ್ದಾಳೆ. ಹೀಗಾಗಿ ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ಡಿಡಿಪಿಯುಚಂದ್ರಕಾಂತ ಜಿ.ಹಿಳ್ಳಿ ಮಾಹಿತಿ ನೀಡಿದರು.</p>.<p>ಬೆಂಗಳೂರು, ಮಂಗಳೂರು, ಕಲಬುರ್ಗಿ, ಬೀದರ್, ರಾಯಚೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ಜಿಲ್ಲೆಯ ವಿದ್ಯಾರ್ಥಿಗಳು ಈಗಾಗಲೇ 5 ವಿಷಯಗಳ ಪರೀಕ್ಷೆ ಬರೆದಿದ್ದಾರೆ. ಆದರೆ, ಲಾಕ್ಡೌನ್ ಆಗಿದ್ದರಿಂದ ಮತ್ತೆ ಅಲ್ಲಿಗೆ ತೆರಳಲು ಆಗಿಲ್ಲ. ಹೀಗಾಗಿ ಸರ್ಕಾರವೇ ವಿದ್ಯಾರ್ಥಿಗಳು ಇದ್ದ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ. ಇದರಿಂದ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ 549 ವಿದ್ಯಾರ್ಥಿಗಳು ಇಂಗ್ಲಿಷ್ ಭಾಷೆಯ ಪರೀಕ್ಷೆ ಬರೆಯಲಿದ್ದಾರೆ.</p>.<p>ಮಾರ್ಚ್ 23ಕ್ಕೆ ಇಂಗ್ಲಿಷ್ ಭಾಷೆ ಪರೀಕ್ಷೆ ನಿಗದಿಯಾಗಿತ್ತು. ಅದಕ್ಕೂ ಮುಂಚೆ ಮಾರ್ಚ್ 22ರಂದು ಭಾರತ ಸಂಪೂರ್ಣ ಘೋಷಣೆ ಮಾಡಲಾಯಿತು. ಆನಂತರ ಮಾರ್ಚ್ 24ರಿಂದ ದೇಶದಲ್ಲಿ ಲಾಕ್ಡೌನ್ ಜಾರಿಗೆ ಬಂದಿದ್ದರಿಂದ ಪರೀಕ್ಷೆ ಮುಂದೂಡಲ್ಪಟ್ಟಿತು. ಈಗ ಜೂನ್ 18ಕ್ಕೆ ಪರೀಕ್ಷೆ ನಿಗದಿಯಾಗಿದೆ.</p>.<p><strong>ಅತಿ ಹೆಚ್ಚು ಸರ್ಕಾರಿ ಕಾಲೇಜಿನಲ್ಲಿ ಪರೀಕ್ಷೆ:</strong></p>.<p>ಮೊದಲು 5,908 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದರು. ಈಗ ಬೇರೆ ಜಿಲ್ಲೆಯ ವಿದ್ಯಾರ್ಥಿಗಳು ಸೇರಿ 6,457 ಪರೀಕ್ಷೆ ಬರೆಯಲಿದ್ದಾರೆ. ಅದರಲ್ಲಿ ಯಾದಗಿರಿಯ ಸರ್ಕಾರಿ ಪದವಿ ಪೂರ್ವ ಬಾಲಕ, ಬಾಲಕಿಯರ ಕಾಲೇಜಿನಲ್ಲಿಅತಿ ಹೆಚ್ಚುವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲಿದ್ದಾರೆ.</p>.<p>ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ 612, 238 ಬೇರೆ ಜಿಲ್ಲೆಯ ಕಾಲೇಜಿನ ವಿದ್ಯಾರ್ಥಿಗಳು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ506, 24 ಬೇರೆ ಜಿಲ್ಲೆಯ ಕಾಲೇಜಿನ ವಿದ್ಯಾರ್ಥಿಗಳು 54 ಕೋಣೆಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಅದರಂತೆನ್ಯೂ ಕನ್ನಡ ಪಿಯು ಕಾಲೇಜಿನ 223 ವಿದ್ಯಾರ್ಥಿಗಳು, 22 ಬೇರೆ ಜಿಲ್ಲೆಯ ವಿದ್ಯಾರ್ಥಿಗಳು, ಜವಾಹರ ಕಾಲೇಜಿನ 413 ಕಾಲೇಜಿನ ವಿದ್ಯಾರ್ಥಿಗಳು, 27 ಬೇರೆ ಕಾಲೇಜಿನ ವಿದ್ಯಾರ್ಥಿಗಳು 47 ಕೋಣೆಗಳಲ್ಲಿ ಪರೀಕ್ಷೆ ಬರೆಯಲಿದ್ದು,ಸಿದ್ಧತೆ ಮಾಡಲಾಗಿದೆ.</p>.<p><strong>13 ಕೇಂದ್ರಗಳನ್ನು ಕ್ವಾರಂಟೈನ್ಗೆ ಕೊಟ್ಟಿಲ್ಲ:</strong></p>.<p>ಜಿಲ್ಲೆಯಲ್ಲಿರುವ ಶಾಲಾ–ಕಾಲೇಜು, ವಸತಿ ನಿಲಯಗಳನ್ನು ಸಾಂಸ್ಥಿಕ ಕ್ವಾರಂಟೈನ್ಗಳಾಗಿ ಪರಿವರ್ತಿಸಲಾಗಿತ್ತು. ಆದರೆ, ಇಂಗ್ಲಿಷ್ ಭಾಷೆಯ ಪರೀಕ್ಷೆ ನಡೆಯುವ 13 ಕೇಂದ್ರಗಳನ್ನು ಸಾಂಸ್ಥಿಕ ಕ್ವಾರಂಟೈನ್ಗೆ ನೀಡಲಾಗಿಲ್ಲ. ಅಲ್ಲದೆ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷೆಗೂ ಮುಂಚೆ ಸ್ಯಾನಿಟೈಸ್ ಮಾಡಿಸಲಾಗುವುದು ಎಂದು ಚಂದ್ರಕಾಂತ ಹಿಳ್ಳಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<p>* ನಮ್ಮ ಜಿಲ್ಲೆಯವರಲ್ಲದೆ ಬೇರೆ ಜಿಲ್ಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರಿಂದ ಅಂತರ ಕಾಪಾಡಿಕೊಳ್ಳುವ ದೃಷ್ಟಿಯಿಂದ ಕೋಣೆಗಳ ಸಂಖ್ಯೆ ಹೆಚ್ಚಳ ಮಾಡಲಾಗಿದೆ</p>.<p><em><strong>–ಚಂದ್ರಕಾಂತ ಜಿ.ಹಿಳ್ಳಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ</strong></em></p>.<p>* ಥರ್ಮಲ್ ಸ್ಕ್ಯಾನಿಂಗ್, ಪೊಲೀಸ್ ಭದ್ರತೆ, ಸ್ಯಾನಿಟೈಸ್ ಮಾಡಲು ವಿವಿಧ ಇಲಾಖೆಗೆ ಪತ್ರ ಬರೆಯಲಾಗಿದೆ. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಎಲ್ಲ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ</p>.<p><em><strong>– ಪೂಜಾರಿ ಗಣಪತಿ, ಸರ್ಕಾರಿ ಬಾಲಕರ ಕಾಲೇಜು ಪ್ರಭಾರಿಪ್ರಾಂಶುಪಾಲ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>