<p><strong>ಯಾದಗಿರಿ</strong>: ಸುರಪುರ ತಾಲ್ಲೂಕಿನಲ್ಲಿ ಕೃಷ್ಣಾ ನದಿಯಿಂದ ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸಿದ ಆರೋಪದಡಿ ಏಳು ಹಿಟಾಚಿಗಳು ಹಾಗೂ ₹4 ಕೋಟಿ ಮೌಲ್ಯದ 47,500 ಮೆಟ್ರಿಕ್ ಟನ್ ಮರಳು ಜಪ್ತಿ ಮಾಡಲಾಗಿದೆ. </p>.<p>ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ವೀರೇಶ ಶಾಂತಪ್ಪ ಅವರು ನೀಡಿದ ದೂರಿನ ಅನ್ವಯ ಹಿಟಾಚಿಗಳ ಆಪರೇಟರ್ ಹಾಗೂ ಮಾಲೀಕರು ಮತ್ತು ಮರಳು ಸಂಗ್ರಹಿಸಿದ ಜಮೀನುಗಳ ಮಾಲೀಕರ ವಿರುದ್ಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮರಳು ದಾಸ್ತಾನು ಮಾಡಿಕೊಂಡಿದ್ದ ಮುಷ್ಟಳಿ ಗ್ರಾಮದ ಚೌಡಮ್ಮ ದುರ್ಗಪ್ಪ, ವಸಂತಬಾಯಿ, ಅಕ್ಷತಾ ಜೈನ್, ಅಂಕಿತಾ ಮತ್ತು ರಾಚಮ್ಮ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಅಧಿಕಾರಿಗಳ ತಂಡಗಳ ಪರಿಶೀಲನೆಯ ವೇಳೆ ನದಿ ದಡದಲ್ಲಿ ಅನಧಿಕೃತವಾಗಿ ಗಣಿಗಾರಿಕೆ ಮಾಡುತ್ತಿದ್ದ ಹಿಟಾಚಿಗಳ ಆಪರೇಟರ್ಗಳು ಓಡಿ ಹೋದರು. ಐವರು ಆರೋಪಿಗಳ ಜಮೀನುಗಳಲ್ಲಿ ₹4 ಕೋಟಿ ಮೌಲ್ಯದ 47,500 ಮೆಟ್ರಿಕ್ ಟನ್ ಮರಳು ಪತ್ತೆಯಾಗಿದೆ. ಕೃಷ್ಣಾ ನದಿಯಿಂದ ಅನಧಿಕೃತವಾಗಿ ಮರಳು ತೆಗೆಯಲು ಬಳಸಿದ್ದ ತಲಾ ₹15 ಲಕ್ಷ ಮೌಲ್ಯದ 7 ಹಿಟಾಚಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಸುರಪುರ ತಾಲ್ಲೂಕಿನಲ್ಲಿ ಕೃಷ್ಣಾ ನದಿಯಿಂದ ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸಿದ ಆರೋಪದಡಿ ಏಳು ಹಿಟಾಚಿಗಳು ಹಾಗೂ ₹4 ಕೋಟಿ ಮೌಲ್ಯದ 47,500 ಮೆಟ್ರಿಕ್ ಟನ್ ಮರಳು ಜಪ್ತಿ ಮಾಡಲಾಗಿದೆ. </p>.<p>ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ವೀರೇಶ ಶಾಂತಪ್ಪ ಅವರು ನೀಡಿದ ದೂರಿನ ಅನ್ವಯ ಹಿಟಾಚಿಗಳ ಆಪರೇಟರ್ ಹಾಗೂ ಮಾಲೀಕರು ಮತ್ತು ಮರಳು ಸಂಗ್ರಹಿಸಿದ ಜಮೀನುಗಳ ಮಾಲೀಕರ ವಿರುದ್ಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮರಳು ದಾಸ್ತಾನು ಮಾಡಿಕೊಂಡಿದ್ದ ಮುಷ್ಟಳಿ ಗ್ರಾಮದ ಚೌಡಮ್ಮ ದುರ್ಗಪ್ಪ, ವಸಂತಬಾಯಿ, ಅಕ್ಷತಾ ಜೈನ್, ಅಂಕಿತಾ ಮತ್ತು ರಾಚಮ್ಮ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಅಧಿಕಾರಿಗಳ ತಂಡಗಳ ಪರಿಶೀಲನೆಯ ವೇಳೆ ನದಿ ದಡದಲ್ಲಿ ಅನಧಿಕೃತವಾಗಿ ಗಣಿಗಾರಿಕೆ ಮಾಡುತ್ತಿದ್ದ ಹಿಟಾಚಿಗಳ ಆಪರೇಟರ್ಗಳು ಓಡಿ ಹೋದರು. ಐವರು ಆರೋಪಿಗಳ ಜಮೀನುಗಳಲ್ಲಿ ₹4 ಕೋಟಿ ಮೌಲ್ಯದ 47,500 ಮೆಟ್ರಿಕ್ ಟನ್ ಮರಳು ಪತ್ತೆಯಾಗಿದೆ. ಕೃಷ್ಣಾ ನದಿಯಿಂದ ಅನಧಿಕೃತವಾಗಿ ಮರಳು ತೆಗೆಯಲು ಬಳಸಿದ್ದ ತಲಾ ₹15 ಲಕ್ಷ ಮೌಲ್ಯದ 7 ಹಿಟಾಚಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>