<p><strong>ಯಾದಗಿರಿ: </strong>‘ಶಾಸಕನಾಗಿದ್ದ ಎರಡು ಅವಧಿಯಲ್ಲಿ ಗುರುಮಠಕಲ್ ಮತಕ್ಷೇತ್ರದ 70 ತಾಂಡಾಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಿದ್ದೇನೆ’ ಎಂದು ಗುರುಮಠಕಲ್ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ ಹೇಳಿದರು.</p>.<p>ಸಮೀಪದ ಹೊಸಳ್ಳಿ ತಾಂಡಾದಲ್ಲಿ ಸೋಮವಾರ ಚುನಾವಣಾ ಏರ್ಪಡಿಸಿದ್ದ ಪ್ರಚಾರಸಭೆಯಲ್ಲಿ ಅವರು ಮಾತನಾಡಿದರು. ‘ಕಾಂಗ್ರೆಸ್ ಸರ್ಕಾರ ಎಲ್ಲಾ ವರ್ಗದ ಜನರ ಕಲ್ಯಾಣಕ್ಕೆ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ವಿಶೇಷವಾಗಿ ಬಂಜಾರ ಸಮಾಜದ ಪ್ರಗತಿಗೆ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆ ಮಾಡಿದೆ’ ಎಂದರು.</p>.<p>‘ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಜನರಿಗೆ ಯಾವುದೇ ರೀತಿ ಸಹಾಯ ಸಹಕಾರ ನೀಡದೆ ಚುನಾವಣೆ ಸಂದರ್ಭದಲ್ಲಿ ಮಾತ್ರ ತಮ್ಮ ಹತ್ತಿರ ಬಂದು ಸುಳ್ಳು ಭರವಸೆ ನೀಡುತ್ತಾರೆ. ಅದಕ್ಕೆ ನೀವು ಕಿವಿಗೊಡಬಾರದು’ ಎಂದರು.</p>.<p>ಮುಖಂಡ ನರೇಂದ್ರ ರಾಠೋಡ್ ಮಾತನಾಡಿ,‘ಸಮಾಜದ ಬಗ್ಗೆ ಕಾಳಜಿ ಹಾಗೂ ಅಭಿವೃದ್ಧಿ ಚಿಂತನೆ ಹೊಂದಿರುವ ಬಾಬುರಾವ್ ಚಿಂಚನಸೂರ ಅವರಿಗೆ ಎಲ್ಲರೂ ಚುನಾವಣೆಯಲ್ಲಿ ಮತ ನೀಡುವ ಮೂಲಕ ಶಕ್ತಿ ತುಂಬಬೇಕು’ ಎಂದು ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಾಷು ರಾಠೋಡ, ಕಿಶನ ಚವ್ಹಾಣ, ಚಂದ್ರಕಾಂತ ಕವಲ್ದಾರ, ಪರಶುರಾಮ ಚವ್ಹಾಣ, ಅರ್ಜುನಪ್ಪ ಬಾಚವಾರ, ತಿಪ್ಪಣ್ಣ ಯಾದವ, ಶಾಂತಪ್ಪ ರಾಠೋಡ, ಮನು ಚವ್ಹಾಣ, ಜಯರಾಮ ದೇವಜೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>‘ಶಾಸಕನಾಗಿದ್ದ ಎರಡು ಅವಧಿಯಲ್ಲಿ ಗುರುಮಠಕಲ್ ಮತಕ್ಷೇತ್ರದ 70 ತಾಂಡಾಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಿದ್ದೇನೆ’ ಎಂದು ಗುರುಮಠಕಲ್ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ ಹೇಳಿದರು.</p>.<p>ಸಮೀಪದ ಹೊಸಳ್ಳಿ ತಾಂಡಾದಲ್ಲಿ ಸೋಮವಾರ ಚುನಾವಣಾ ಏರ್ಪಡಿಸಿದ್ದ ಪ್ರಚಾರಸಭೆಯಲ್ಲಿ ಅವರು ಮಾತನಾಡಿದರು. ‘ಕಾಂಗ್ರೆಸ್ ಸರ್ಕಾರ ಎಲ್ಲಾ ವರ್ಗದ ಜನರ ಕಲ್ಯಾಣಕ್ಕೆ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ವಿಶೇಷವಾಗಿ ಬಂಜಾರ ಸಮಾಜದ ಪ್ರಗತಿಗೆ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆ ಮಾಡಿದೆ’ ಎಂದರು.</p>.<p>‘ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಜನರಿಗೆ ಯಾವುದೇ ರೀತಿ ಸಹಾಯ ಸಹಕಾರ ನೀಡದೆ ಚುನಾವಣೆ ಸಂದರ್ಭದಲ್ಲಿ ಮಾತ್ರ ತಮ್ಮ ಹತ್ತಿರ ಬಂದು ಸುಳ್ಳು ಭರವಸೆ ನೀಡುತ್ತಾರೆ. ಅದಕ್ಕೆ ನೀವು ಕಿವಿಗೊಡಬಾರದು’ ಎಂದರು.</p>.<p>ಮುಖಂಡ ನರೇಂದ್ರ ರಾಠೋಡ್ ಮಾತನಾಡಿ,‘ಸಮಾಜದ ಬಗ್ಗೆ ಕಾಳಜಿ ಹಾಗೂ ಅಭಿವೃದ್ಧಿ ಚಿಂತನೆ ಹೊಂದಿರುವ ಬಾಬುರಾವ್ ಚಿಂಚನಸೂರ ಅವರಿಗೆ ಎಲ್ಲರೂ ಚುನಾವಣೆಯಲ್ಲಿ ಮತ ನೀಡುವ ಮೂಲಕ ಶಕ್ತಿ ತುಂಬಬೇಕು’ ಎಂದು ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಾಷು ರಾಠೋಡ, ಕಿಶನ ಚವ್ಹಾಣ, ಚಂದ್ರಕಾಂತ ಕವಲ್ದಾರ, ಪರಶುರಾಮ ಚವ್ಹಾಣ, ಅರ್ಜುನಪ್ಪ ಬಾಚವಾರ, ತಿಪ್ಪಣ್ಣ ಯಾದವ, ಶಾಂತಪ್ಪ ರಾಠೋಡ, ಮನು ಚವ್ಹಾಣ, ಜಯರಾಮ ದೇವಜೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>