ನಾರಾಯಣಪುರ (ಹುಣಸಗಿ): ಕಳೆದ ಎರಡು ದಿನಗಳಿಂದ ಮಳೆ ಆರಂಭವಾಗಿದ್ದು, ರಾಜ್ಯದ ನೀರಾವರಿ ಯೋಜನೆಗಳಲ್ಲಿ ಒಂದಾದ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಇದರಿಂದಾಗಿ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ. ಜಲಾಶಯದ ಕ್ರಷ್ಟ್ಗೇಟ್ಗಳಿಂದ 6 ಸಾವಿರ ಕ್ಯುಸೆಕ್ ಹಾಗೂ ಮುರುಡೇಶ್ವರ ಜಲ ವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯುಸೆಕ್ ಒಟ್ಟು 9 ಸಾವಿರ ಕ್ಯುಸೆಕ್ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.