<p><strong>ಯಾದಗಿರಿ:</strong> ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಎಲ್ಲಾ ಕನ್ನಡದ ಮನಸ್ಸುಗಳನ್ನು ಸಂಘಟನಾತ್ಮಕವಾಗಿ ತೆಗೆದುಕೊಂಡು ಹೋಗಬೇಕು ಎಂದು ಕ್ರೈಸ್ತ ಸಮಾಜದ ಮುಖಂಡ ವಿಜಯರತ್ನ ಅವರು ಸಿದ್ದಪ್ಪ ಹೊಟ್ಟಿ ಅವರಿಗೆ ಕಿವಿಮಾತು ಹೇಳಿದರು.</p>.<p>ನಗರದ ಹೊಸಳ್ಳಿ ಕ್ರಾಸ್ ಹತ್ತಿರದಲ್ಲಿರುವ ತಾತಾ ಸೀಮೆಂಡ್ಸ್ ಮೆಮೋರಿಯಲ್ ಮೆಥೋಡಿಸ್ಟ್ ಚರ್ಚ್ನಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ 3ನೇ ಬಾರಿಗೆ ಆಯ್ಕೆಯಾದ ಸಿದ್ದಪ್ಪ ಹೊಟ್ಟಿಯವರನ್ನು ಸನ್ಮಾನಿಸಿ ಮಾತನಾಡಿದರು.</p>.<p>ಕನ್ನಡಿಗರ ಸೌರ್ವಭೌಮ ಸಂಸ್ಥೆಯಾದ ಪರಿಷತ್ತು ಜಾತಿ, ಮಥಗಳನ್ನು ಮೀರಿ ನಿಂತಿದೆ. ಅಂಥ ಪರಿಷತ್ಅಧ್ಯಕ್ಷರಾಗಿ ಹೊಟ್ಟಿ ಅವರು ಪುಟ್ಟ ಜಿಲ್ಲೆಯಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಕಿರಿಜಿಲ್ಲೆಯ ಗೌರವವನ್ನು ಹೆಚ್ಚಿಸಬೇಕೆಂದು ಹೇಳಿದರು.</p>.<p>ಕ್ರೈಸ್ತ ಸಮಾಜದಲ್ಲಿ ಸಾಹಿತ್ಯಕ ಕೃಷಿ ಮಾಡುತ್ತಿರುವವರು ಅನೇಕರಿದ್ದಾರೆ. ಪರಿಷತ್ತು ಅಂಥವರನ್ನು ಗುರುತಿಸಿ ಸೂಕ್ತ ಅವಕಾಶಗಳನ್ನು ನೀಡಿ ಸಾಹಿತ್ಯ ಕ್ಷೇತ್ರಕ್ಕೆ ಪರಿಚಯಿಸುವ ಕೆಲಸ ಮಾಡಬೇಕು ಎಂದು ಅಧ್ಯಕ್ಷರಲ್ಲಿ ಮನವಿ ಮಾಡಿದರು.</p>.<p>ಸತ್ಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ತಾವು ಮಾಡಿರುವ ಸತ್ಕಾರ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ಮುಂಬರುವ ದಿನಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ಏರ್ಪಡಿಸಿ ಸಾಹಿತ್ಯಿಕ ವಾತಾವರಣವನ್ನು ನಿರ್ಮಾಣ ಮಾಡುವುದಾಗಿ ಹೇಳಿದರು.</p>.<p>ಪರಿಷತ್ತಿನ ಚಟುವಟಿಕೆಗಳಲ್ಲಿ ಎಲ್ಲರನ್ನು ಸಮಾನವಾಗಿ ತೆಗೆದುಕೊಂಡು ಹೋಗುವುದರ ಮೂಲಕ ಪರಿಷತ್ತಿನ ಘನತೆ ಗೌರವವನ್ನು ಎತ್ತಿ ಹಿಡಿಯುವುದಾಗಿ ಭರವಸೆ ನೀಡಿದರು.</p>.<p>ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೇರಿ, ಸಮಾಜದ ಮುಖಂಡರಾದ ಸಾಂಸನ್ ಜೆ, ರಾಜು ಮೈಗೂರ್, ಸುರೇಶ ಸೈಲೇಶ, ಬಿ.ಕೆ.ಆನಂದ, ಸುನಾಥರಡ್ಡಿ, ನಾಗರಾಜ ಬಿರನೂರ, ಶಾಂತರಾಜ ರಡ್ಡಿ, ಚಂದ್ರಕಾಂತ, ಶರಣಪ್ಪ, ಚಿಮ್ಮು, ಮೇಘನಾಥ ಬೆಳ್ಳಿ, ಸುಂದರರಾಜ್, ಲಾರನ್ಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಎಲ್ಲಾ ಕನ್ನಡದ ಮನಸ್ಸುಗಳನ್ನು ಸಂಘಟನಾತ್ಮಕವಾಗಿ ತೆಗೆದುಕೊಂಡು ಹೋಗಬೇಕು ಎಂದು ಕ್ರೈಸ್ತ ಸಮಾಜದ ಮುಖಂಡ ವಿಜಯರತ್ನ ಅವರು ಸಿದ್ದಪ್ಪ ಹೊಟ್ಟಿ ಅವರಿಗೆ ಕಿವಿಮಾತು ಹೇಳಿದರು.</p>.<p>ನಗರದ ಹೊಸಳ್ಳಿ ಕ್ರಾಸ್ ಹತ್ತಿರದಲ್ಲಿರುವ ತಾತಾ ಸೀಮೆಂಡ್ಸ್ ಮೆಮೋರಿಯಲ್ ಮೆಥೋಡಿಸ್ಟ್ ಚರ್ಚ್ನಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ 3ನೇ ಬಾರಿಗೆ ಆಯ್ಕೆಯಾದ ಸಿದ್ದಪ್ಪ ಹೊಟ್ಟಿಯವರನ್ನು ಸನ್ಮಾನಿಸಿ ಮಾತನಾಡಿದರು.</p>.<p>ಕನ್ನಡಿಗರ ಸೌರ್ವಭೌಮ ಸಂಸ್ಥೆಯಾದ ಪರಿಷತ್ತು ಜಾತಿ, ಮಥಗಳನ್ನು ಮೀರಿ ನಿಂತಿದೆ. ಅಂಥ ಪರಿಷತ್ಅಧ್ಯಕ್ಷರಾಗಿ ಹೊಟ್ಟಿ ಅವರು ಪುಟ್ಟ ಜಿಲ್ಲೆಯಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಕಿರಿಜಿಲ್ಲೆಯ ಗೌರವವನ್ನು ಹೆಚ್ಚಿಸಬೇಕೆಂದು ಹೇಳಿದರು.</p>.<p>ಕ್ರೈಸ್ತ ಸಮಾಜದಲ್ಲಿ ಸಾಹಿತ್ಯಕ ಕೃಷಿ ಮಾಡುತ್ತಿರುವವರು ಅನೇಕರಿದ್ದಾರೆ. ಪರಿಷತ್ತು ಅಂಥವರನ್ನು ಗುರುತಿಸಿ ಸೂಕ್ತ ಅವಕಾಶಗಳನ್ನು ನೀಡಿ ಸಾಹಿತ್ಯ ಕ್ಷೇತ್ರಕ್ಕೆ ಪರಿಚಯಿಸುವ ಕೆಲಸ ಮಾಡಬೇಕು ಎಂದು ಅಧ್ಯಕ್ಷರಲ್ಲಿ ಮನವಿ ಮಾಡಿದರು.</p>.<p>ಸತ್ಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ತಾವು ಮಾಡಿರುವ ಸತ್ಕಾರ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ಮುಂಬರುವ ದಿನಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ಏರ್ಪಡಿಸಿ ಸಾಹಿತ್ಯಿಕ ವಾತಾವರಣವನ್ನು ನಿರ್ಮಾಣ ಮಾಡುವುದಾಗಿ ಹೇಳಿದರು.</p>.<p>ಪರಿಷತ್ತಿನ ಚಟುವಟಿಕೆಗಳಲ್ಲಿ ಎಲ್ಲರನ್ನು ಸಮಾನವಾಗಿ ತೆಗೆದುಕೊಂಡು ಹೋಗುವುದರ ಮೂಲಕ ಪರಿಷತ್ತಿನ ಘನತೆ ಗೌರವವನ್ನು ಎತ್ತಿ ಹಿಡಿಯುವುದಾಗಿ ಭರವಸೆ ನೀಡಿದರು.</p>.<p>ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೇರಿ, ಸಮಾಜದ ಮುಖಂಡರಾದ ಸಾಂಸನ್ ಜೆ, ರಾಜು ಮೈಗೂರ್, ಸುರೇಶ ಸೈಲೇಶ, ಬಿ.ಕೆ.ಆನಂದ, ಸುನಾಥರಡ್ಡಿ, ನಾಗರಾಜ ಬಿರನೂರ, ಶಾಂತರಾಜ ರಡ್ಡಿ, ಚಂದ್ರಕಾಂತ, ಶರಣಪ್ಪ, ಚಿಮ್ಮು, ಮೇಘನಾಥ ಬೆಳ್ಳಿ, ಸುಂದರರಾಜ್, ಲಾರನ್ಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>