<p><strong>ಯಾದಗಿರಿ: </strong>ಬಡ ಮತ್ತು ನಿರ್ಗತಿಕ ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸಲು 25 ಹೊಲಿಗೆ ಯಂತ್ರಗಳನ್ನು ತಮ್ಮ ಕಡೆಯಿಂದ ವಿತರಿಸಲಾಗುವುದು ಎಂದು ಜೆಡಿಎಸ್ ರಾಜ್ಯ ಯುವ ಮುಖಂಡ ಶರಣಗೌಡ ಕಂದಕೂರ ಪ್ರಕಟಿಸಿದರು.</p>.<p>ಮಾತೋಶ್ರೀ ಬಸಮ್ಮ ಶರಬಣ್ಣ ಸೇವಾ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಸಹಾರಾ ಕಾಲೊನಿಯಲ್ಲಿರುವ ಬೀಚಿ ಉದ್ಯಾನ ವನದಲ್ಲಿ ಹಮ್ಮಿಕೊಂಡಿದ್ದ ಹಾಸ್ಯೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತಾಯಿಯನ್ನು ನೆನಪು ಮಾಡಿಕೊಳ್ಳಲು ಹಾಸ್ಯೋತ್ಸವ ಏರ್ಪಡಿಸಿದ್ದು ಶ್ಲಾಘನೀಯ. ಈ ಮೂಲಕ ತಾಯಿಯನ್ನು ಗೌರವಿಸಿದಂತಾಗಿದೆ ಎಂದು ಅಭಿಪ್ರಾಯಪಟ್ಟರು.</p>.<p>ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ ಮಾತನಾಡಿ, ತಾಯಿಯ ಕುರಿತು ಹಾಸ್ಯ ಕಲಾವಿದ ಬಸವರಾಜ ಮಹಾಮನಿ ಇಂಥ ಕಾರ್ಯಕ್ರಮ ಮಾಡಿರುವುದು ಸಂತಸದಾಯಕ ಎಂದು ಹೇಳಿ ತಾಯಿಯ ಕುರಿತು ತಾವೇ ರಚಿಸಿದ ಕವನ ವಾಚಿಸಿದರು.</p>.<p>ಹಿರಿಯ ಸಾಹಿತಿ ಎಚ್.ವಿಜಯ ಭಾಸ್ಕರ್ ಅವರು ರಚಿಸಿರುವ ‘ಇಬ್ಬರೂ ಪ್ರಚಂಡ ಪ್ರವಾದಿಗಳು ಮತ್ತು ಇಬ್ಬರು ಕುಷ್ಟರೋಗಿಗಳು’ ಕೃತಿ ಬಿಡುಗಡೆಗೊಳಿಸಲಾಯಿತು.</p>.<p>ನಿವೃತ್ತ ಪ್ರಾಂಶುಪಾಲ ವಿಜಯರತ್ನ ಕುಮಾರ ಕೃತಿ ಕುರಿತು ಮಾತನಾಡಿ, ಈ ಕೃತಿಯಲ್ಲಿ ವಾಸ್ತವತೆಗೆ ಹಿಡಿದ ಕೈಗನ್ನಡಿಯಾಗಿರುವ ಹಲವಾರು ಅಂಶಗಳು ಎದ್ದು ಕಾಣುತ್ತಿವೆ. ಜೊತೆಗೆ ಒಬ್ಬ ಸಾಹಿತಿಯ ಬದುಕು ಮತ್ತು ಬರಹ ಒಂದೇ ನೆಲೆಗಟ್ಟಿನಲ್ಲಿರಬೇಕು ಎಂಬುದನ್ನು ಈ ಕೃತಿ ಸಾಬೀತುಪಡಿಸಿದಂತಾಗಿದೆ ಎಂದು ಹೇಳಿದರು.</p>.<p>ಉದಯ ಟಿವಿ ಹರಟೆ ಖ್ಯಾತಿಯ ಇಂದುಮತಿ ಸಾಲಿಮಠ, ಎರಡಕ್ಷರ ಖ್ಯಾತಿಯ ಬಸವರಾಜ ಬೆಣ್ಣಿ, ಜವಾರಿ ಹಾಸ್ಯ ಖ್ಯಾತಿಯ ಕಲಬುರ್ಗಿ ಗುಂಡಣ್ಣ ಡಿಗ್ಗಿ ಅವರಿಂದ ಹಾಸ್ಯೋತ್ಸವ ಜರುಗಿತು. ಸಭಿಕರೆಲ್ಲರನ್ನು ನಗೆಗಡಲಲ್ಲಿ ತೇಲಿಸಿದ್ದು ವಿಶೇಷವಾಗಿತ್ತು.</p>.<p>ಅಮೂಲ್ಯ ಹಾಗೂ ಸಂಗಡಿಗರಿಂದ ಸಮೂಹ ನೃತ್ಯ ಹಾಗೂ ಮರೆಪ್ಪ ಶಿರವಾಳ ಅವರಿಂದ ಜಾನಪದ ಸಂಗೀತ ಕಾರ್ಯಕ್ರಮಗಳು ಜರುಗಿದವು. ಈ ವೇಳೆ ಕಾರ್ಯನಿರತರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಇಂದುಧರ ಸಿನ್ನೂರು ಅವರನ್ನು ಸನ್ಮಾನಿಸಲಾಯಿತು.</p>.<p>ನಗರಸಭೆ ಪ್ರಭಾರಿ ಪೌರಾಯುಕ್ತ ಬಕ್ಕಪ್ಪ ಹೊಸಮನಿ, ನಗರಸಭೆ ಸದಸ್ಯ ಗಣೇಶ್ ದುಪ್ಪಲ್ಲಿ, ನೂರಾರು ಸಾರ್ವಜನಿಕರು ಇದ್ದರು. ಟ್ರಸ್ಟ್ನ ಅಧ್ಯಕ್ಷ ಬಸವರಾಜ ಮಹಾಮನಿ ಪ್ರಸ್ತಾವಿಕವಾಗಿ ಮಾತನಾಡಿದರು. ಬಸವರಾಜ ಸಿನ್ನೂರ ನಿರೂಪಿಸಿದರು. ಅಶ್ವಿನಿ ಹೊಸಪೇಟೆ ಸ್ವಾಗತಿಸಿದರು. ಮಹೇಶ್ ಕಲಬುರ್ಗಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಬಡ ಮತ್ತು ನಿರ್ಗತಿಕ ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸಲು 25 ಹೊಲಿಗೆ ಯಂತ್ರಗಳನ್ನು ತಮ್ಮ ಕಡೆಯಿಂದ ವಿತರಿಸಲಾಗುವುದು ಎಂದು ಜೆಡಿಎಸ್ ರಾಜ್ಯ ಯುವ ಮುಖಂಡ ಶರಣಗೌಡ ಕಂದಕೂರ ಪ್ರಕಟಿಸಿದರು.</p>.<p>ಮಾತೋಶ್ರೀ ಬಸಮ್ಮ ಶರಬಣ್ಣ ಸೇವಾ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಸಹಾರಾ ಕಾಲೊನಿಯಲ್ಲಿರುವ ಬೀಚಿ ಉದ್ಯಾನ ವನದಲ್ಲಿ ಹಮ್ಮಿಕೊಂಡಿದ್ದ ಹಾಸ್ಯೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತಾಯಿಯನ್ನು ನೆನಪು ಮಾಡಿಕೊಳ್ಳಲು ಹಾಸ್ಯೋತ್ಸವ ಏರ್ಪಡಿಸಿದ್ದು ಶ್ಲಾಘನೀಯ. ಈ ಮೂಲಕ ತಾಯಿಯನ್ನು ಗೌರವಿಸಿದಂತಾಗಿದೆ ಎಂದು ಅಭಿಪ್ರಾಯಪಟ್ಟರು.</p>.<p>ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ ಮಾತನಾಡಿ, ತಾಯಿಯ ಕುರಿತು ಹಾಸ್ಯ ಕಲಾವಿದ ಬಸವರಾಜ ಮಹಾಮನಿ ಇಂಥ ಕಾರ್ಯಕ್ರಮ ಮಾಡಿರುವುದು ಸಂತಸದಾಯಕ ಎಂದು ಹೇಳಿ ತಾಯಿಯ ಕುರಿತು ತಾವೇ ರಚಿಸಿದ ಕವನ ವಾಚಿಸಿದರು.</p>.<p>ಹಿರಿಯ ಸಾಹಿತಿ ಎಚ್.ವಿಜಯ ಭಾಸ್ಕರ್ ಅವರು ರಚಿಸಿರುವ ‘ಇಬ್ಬರೂ ಪ್ರಚಂಡ ಪ್ರವಾದಿಗಳು ಮತ್ತು ಇಬ್ಬರು ಕುಷ್ಟರೋಗಿಗಳು’ ಕೃತಿ ಬಿಡುಗಡೆಗೊಳಿಸಲಾಯಿತು.</p>.<p>ನಿವೃತ್ತ ಪ್ರಾಂಶುಪಾಲ ವಿಜಯರತ್ನ ಕುಮಾರ ಕೃತಿ ಕುರಿತು ಮಾತನಾಡಿ, ಈ ಕೃತಿಯಲ್ಲಿ ವಾಸ್ತವತೆಗೆ ಹಿಡಿದ ಕೈಗನ್ನಡಿಯಾಗಿರುವ ಹಲವಾರು ಅಂಶಗಳು ಎದ್ದು ಕಾಣುತ್ತಿವೆ. ಜೊತೆಗೆ ಒಬ್ಬ ಸಾಹಿತಿಯ ಬದುಕು ಮತ್ತು ಬರಹ ಒಂದೇ ನೆಲೆಗಟ್ಟಿನಲ್ಲಿರಬೇಕು ಎಂಬುದನ್ನು ಈ ಕೃತಿ ಸಾಬೀತುಪಡಿಸಿದಂತಾಗಿದೆ ಎಂದು ಹೇಳಿದರು.</p>.<p>ಉದಯ ಟಿವಿ ಹರಟೆ ಖ್ಯಾತಿಯ ಇಂದುಮತಿ ಸಾಲಿಮಠ, ಎರಡಕ್ಷರ ಖ್ಯಾತಿಯ ಬಸವರಾಜ ಬೆಣ್ಣಿ, ಜವಾರಿ ಹಾಸ್ಯ ಖ್ಯಾತಿಯ ಕಲಬುರ್ಗಿ ಗುಂಡಣ್ಣ ಡಿಗ್ಗಿ ಅವರಿಂದ ಹಾಸ್ಯೋತ್ಸವ ಜರುಗಿತು. ಸಭಿಕರೆಲ್ಲರನ್ನು ನಗೆಗಡಲಲ್ಲಿ ತೇಲಿಸಿದ್ದು ವಿಶೇಷವಾಗಿತ್ತು.</p>.<p>ಅಮೂಲ್ಯ ಹಾಗೂ ಸಂಗಡಿಗರಿಂದ ಸಮೂಹ ನೃತ್ಯ ಹಾಗೂ ಮರೆಪ್ಪ ಶಿರವಾಳ ಅವರಿಂದ ಜಾನಪದ ಸಂಗೀತ ಕಾರ್ಯಕ್ರಮಗಳು ಜರುಗಿದವು. ಈ ವೇಳೆ ಕಾರ್ಯನಿರತರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಇಂದುಧರ ಸಿನ್ನೂರು ಅವರನ್ನು ಸನ್ಮಾನಿಸಲಾಯಿತು.</p>.<p>ನಗರಸಭೆ ಪ್ರಭಾರಿ ಪೌರಾಯುಕ್ತ ಬಕ್ಕಪ್ಪ ಹೊಸಮನಿ, ನಗರಸಭೆ ಸದಸ್ಯ ಗಣೇಶ್ ದುಪ್ಪಲ್ಲಿ, ನೂರಾರು ಸಾರ್ವಜನಿಕರು ಇದ್ದರು. ಟ್ರಸ್ಟ್ನ ಅಧ್ಯಕ್ಷ ಬಸವರಾಜ ಮಹಾಮನಿ ಪ್ರಸ್ತಾವಿಕವಾಗಿ ಮಾತನಾಡಿದರು. ಬಸವರಾಜ ಸಿನ್ನೂರ ನಿರೂಪಿಸಿದರು. ಅಶ್ವಿನಿ ಹೊಸಪೇಟೆ ಸ್ವಾಗತಿಸಿದರು. ಮಹೇಶ್ ಕಲಬುರ್ಗಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>