ಹುಣಸಗಿ: ನಿಜಾಮನ ಆಡಳಿತದ ಕಪಿಮುಷ್ಠಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶ ಇಂದಿನ ದಿನದಂದು ಸ್ವಾತಂತ್ರ್ಯವಾಗಿದ್ದು, ಈ ಹೋರಾಟದಲ್ಲಿ ಪಾಲ್ಗೊಂಡಿದ್ದ ನಾಯಕರನ್ನು ಸ್ಮರಿಸುವ ಮಹತ್ವದ ದಿನವಾಗಿದೆ ಎಂದು ತಹಶೀಲ್ದಾರ್ ವಿನಯಕುಮಾರ ಪಾಟೀಲ ಹೇಳಿದರು.
ಹುಣಸಗಿ ಪಟ್ಟಣದಲ್ಲಿ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸರ್ದಾರ್ ವಲ್ಲಭಭಾಯ್ ಪಟೇಲ್ ಹಾಗೂ ಇಲ್ಲಿನ ಸ್ಥಳೀಯ ಹೋರಾಟಗಾರರ ಸತತ ಪ್ರಯತ್ನದಿಂದಾಗಿ ಈ ಪ್ರದೇಶ ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಒಂದಾಯಿತು ಎಂದು ಹೇಳಿದರು.