ಒಟ್ಟು 3 ಎಕರೆ ಜಮೀನಿನಲ್ಲಿ ಖರಬೂಜ ಬೆಳೆಯಲು ಸುಮಾರು ₹2 ರಿಂದ 3 ಲಕ್ಷ ಖರ್ಚು ಮಾಡಿದ್ದಾರೆ. ಇದರಲ್ಲಿ ಈಗಾಗಲೇ 7 ಟನ್ ಕರಬೂಜ ಹಣ್ಣುಗಳನ್ನು ಕೆ.ಜಿ.ಗೆ ₹20ರಂತೆ ಮಾರಾಟ ಮಾಡಿದ್ದಾರೆ. ಇನ್ನು 20 ಟನ್ಗಿಂತ ಅಧಿಕ ಹಣ್ಣುಗಳು ಕಟಾವು ಆಗದೆ ಹೊಲದಲ್ಲಿ ಇವೆ. ಲಾಕ್ಡೌನ್ ಮಧ್ಯೆಯೂ ಸರ್ಕಾರ ಹಣ್ಣು– ತರಕಾರಿಗಳ ಮಾರಾಟಕ್ಕೆ ರಿಯಾಯಿತಿ ನೀಡಿರುವುದರಿಂದ ಹಣ್ಣುಗಳನ್ನು ಪ್ರತಿ ನಿತ್ಯ ಕಟಾವು ಮಾಡಿ ಸಮೀಪದ ಯಾದಗಿರಿ, ಶಹಾಪುರ, ರಾಯಚೂರು, ನಾರಾಯಣಪೇಠ ಮಾರುಕಟ್ಟೆಗಳಿಗೆ ಬಾಡಿಗೆ ವಾಹನದ ಮೂಲಕ ತಲುಪಿಸುತ್ತಾರೆ.