ಯಾದಗಿರಿಯಲ್ಲಿ ಮಾಜಿ ಸಚಿವ ಡಾ.ಎ.ಬಿ.ಮಾಲಕರೆಡ್ಡಿ, ಗುರುಮಠಕಲ್ನಲ್ಲಿ ಶರಣಗೌಡ ಕಂದಕೂರ, ಶಹಾಪುರದಲ್ಲಿ ಗುರುಪಾಟೀಲ ಶಿರವಾಳ ಜೆಡಿಎಸ್ ಪರವಾಗಿ ಪ್ರತ್ಯೇಕ ಸಭೆಗಳನ್ನು ಮಾಡಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಆದರೆ, ಬಿಜೆಪಿ ಹಮ್ಮಿಕೊಳ್ಳುವ ರೋಡ್ ಶೋ, ವೇದಿಕೆ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿಲ್ಲ. ಇದರಿಂದ ಇನ್ನೂ ಮೈತ್ರಿ ಧರ್ಮ ಪಾಲನೆ ಆಗುತ್ತಿಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿವೆ.