ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಗುತ್ತೇದಾರ ಮಾತನಾಡಿ, ‘ಕೇಂದ್ರ ಸರ್ಕಾರ ಸರ್ವಾಧಿಕಾರಿಯ ಧೋರಣೆ ಮಾಡುತ್ತಿದೆ. ಸಂಸತ್ನಲ್ಲಿ 146 ಸದಸ್ಯರನ್ನು ಅಮಾನತು ಮಾಡಿ ಸದನದಿಂದ ಹೊರ ಕಳುಹಿಸಿರುವುದೇ ಇದಕ್ಕೆ ನಿದರ್ಶನವಾಗಿದೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಸರ್ಕಾರಕ್ಕೆ ಹೆಜ್ಜೆ ಹೆಜ್ಜೆಗೂ ಅಡ್ಡಿ, ಆತಂಕ ಉಂಟು ಮಾಡುತ್ತಿದೆ’ ಎಂದು ಆರೋಪಿಸಿದರು.