ಕರ್ನಾಟಕ, ತೆಲಂಗಾಣ, ಆಂಧ್ರ, ಮಹಾರಾಷ್ಟ್ರ ಸೇರಿದಂತೆ ಸಾವಿರಾರು ಭಕ್ತರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಶಾಂತಿ, ಸೌಹಾರ್ದತೆಯಿಂದ ನಡೆದ ಭಕ್ತಿಯ ಈ ಪಾದಯಾತ್ರೆಯನ್ನು ಎಲ್ಲರೂ ವ್ಯವಸ್ಥಿತವಾಗಿ ನಡೆಸಿಕೊಂಡು ಬಂದರು. ಪಾದಯಾತ್ರೆಯ ಸಂದರ್ಭದಲ್ಲಿ ಸಂಬಂಧ ಪಟ್ಟ ಇಲಾಖೆಯ ಸಿಬ್ಬಂದಿ, ಆರೋಗ್ಯ, ಜೆಸ್ಕಾಂ ಇಲಾಖೆ ಮುಂತಾದವರು ಪಾದಯಾತ್ರೆ ಸಾಂಗೋಪಾಂಗವಾಗಿ ನೆರವೇರಲು ಸಹಕರಿಸಿದರು ಎಂದು ಮಠದ ವಕ್ತಾರ ಪ್ರೊ.ಸುಭಾಶ್ಚಂದ್ರ ಕೌಲಗಿ ತಿಳಿಸಿದ್ದಾರೆ.