ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೃಷಿ ಭೂಮಿ ಖರೀದಿ ಕಾನೂನು ರದ್ದುಪಡಿಸಿ’

Last Updated 17 ಜುಲೈ 2020, 16:28 IST
ಅಕ್ಷರ ಗಾತ್ರ

ಯಾದಗಿರಿ: ಭೂ ಸುಧಾರಣೆಗೆ ತಿದ್ದುಪಡಿ ಮಾಡಿದ ಕಾಯ್ದೆಯಿಂದ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಕೂಡಲೇ ಕಾಯ್ದೆಯನ್ನು ಮೊದಲಿನ ರೂಪಕ್ಕೆ ತನ್ನಿ ಇಲ್ಲವೇಗುತ್ತಿಗೆಆಧಾರದ ಮೇಲೆ ಕೃಷಿ ಭೂಮಿ ಹೊಂದುವ ಕಾನೂನು ರೂಪಿಸುವಂತೆ ಕಿಸಾನ್ ಕಾಂಗ್ರೆಸ್‌ನ ಜಿಲ್ಲಾ ಕಾರ್ಯಾಧ್ಯಕ್ಷ ಮಾಣಿಕರೆಡ್ಡಿ ಕುರಕುಂದಿ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಈ ಕಾಯ್ದೆ ಕಾರ್ಪೋರೆಟ್ ವಲಯದವರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡಲು ವೇದಿಕೆ ಸಿದ್ಧಪಡಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕಾಯ್ದೆಯಿಂದ ಮೇಲ್ನೊಟಕ್ಕೆ ಪ್ರಗತಿಪರ ಎನಿಸಿದರೂ ನಂತರದ ದಿನಗಳಲ್ಲಿ ಆಹಾರ ಉತ್ಪಾದನೆ ಮೇಲೆ ಭಾರಿ ಹೊಡೆತ ಬೀಳಲಿದ್ದು, ಕೃಷಿ ಕ್ಷೇತ್ರ ನಾಶವಾಗಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಣ್ಣ ಪುಟ್ಟ ರೈತರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಿಗೆ ಇರುವ ಭೂಮಿಯ ಭದ್ರತೆಯ ಮೇಲೆ ಜೀವನ ನಡೆಸುತ್ತಿದ್ದಾರೆ. ಮದುವೆ, ಇನ್ನಿತರ ಪ್ರತಿಯೊಂದಕ್ಕೂ ಕೃಷಿ ಭೂಮಿಯ ಭದ್ರತೆ ಆಧರಿಸಿ ಸಾಲ ಪಡೆಯುತ್ತಿದ್ದಾರೆ. ಇದು ಇನ್ನು ಮುಂದೆ ತಪ್ಪಿ ಹೋಗುವ ಸಾಧ್ಯತೆ ಹೆಚ್ಚಾಗಿದೆ. ಭೂ ಬ್ಯಾಂಕುಗಳು ಸ್ಥಾಪನೆಯಾಗಲಿವೆ. ಆ ಮೂಲಕ ಭೂಮಿಯ ಮೇಲೆ ಕಾರ್ಪೋರೇಟ್ ಹಿಡಿತ ಹೆಚ್ಚಾಗುತ್ತದೆ. ಆಹಾರ ಸ್ವಾವಲಂಬನೆ ಕನಸಿನ ಮಾತಾಗುತ್ತದೆ. ಕೃಷಿ ಉತ್ಪನ್ನಗಳ ಬೆಲೆ ಗಗನಕ್ಕೇರಲಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT