ರಾಜ್ಯದಲ್ಲಿ ಸಣ್ಣ ಪುಟ್ಟ ರೈತರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಿಗೆ ಇರುವ ಭೂಮಿಯ ಭದ್ರತೆಯ ಮೇಲೆ ಜೀವನ ನಡೆಸುತ್ತಿದ್ದಾರೆ. ಮದುವೆ, ಇನ್ನಿತರ ಪ್ರತಿಯೊಂದಕ್ಕೂ ಕೃಷಿ ಭೂಮಿಯ ಭದ್ರತೆ ಆಧರಿಸಿ ಸಾಲ ಪಡೆಯುತ್ತಿದ್ದಾರೆ. ಇದು ಇನ್ನು ಮುಂದೆ ತಪ್ಪಿ ಹೋಗುವ ಸಾಧ್ಯತೆ ಹೆಚ್ಚಾಗಿದೆ. ಭೂ ಬ್ಯಾಂಕುಗಳು ಸ್ಥಾಪನೆಯಾಗಲಿವೆ. ಆ ಮೂಲಕ ಭೂಮಿಯ ಮೇಲೆ ಕಾರ್ಪೋರೇಟ್ ಹಿಡಿತ ಹೆಚ್ಚಾಗುತ್ತದೆ. ಆಹಾರ ಸ್ವಾವಲಂಬನೆ ಕನಸಿನ ಮಾತಾಗುತ್ತದೆ. ಕೃಷಿ ಉತ್ಪನ್ನಗಳ ಬೆಲೆ ಗಗನಕ್ಕೇರಲಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.