<p><strong>ಸುರಪುರ:</strong> ‘ಯುವಕರಲ್ಲಿ ದೇಶಾಭಿಮಾನ ಮೂಡಿಸುವಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು (ಎಬಿವಿಪಿ) ವಿದ್ಯಾರ್ಥಿ ಸಂಘಟನೆ ಮುಂಚೂಣಿಯಲ್ಲಿದೆ’ ಎಂದು ಪರಿಷತ್ನ ರಾಜ್ಯ ಸಮಿತಿ ಉಪಾಧ್ಯಕ್ಷ ಉಪೇಂದ್ರನಾಯಕ ಸುಬೇದಾರ ಹೇಳಿದರು.</p>.<p>ನಗರದ ಪ್ರಭು ಮತ್ತು ಬೋಹರಾ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಎಬಿವಿಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ದೇಶದ ಅತಿ ದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿದೆ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಹೋರಾಟ ರೂಪಿಸಿ ಪರಿಹಾರ ದೊರಕಿಸಿದ ಶ್ರೇಯಸ್ಸು ಸಂಘಟನೆಗೆ ಇದೆ. ನಿರಂತರವಾಗಿ ಅಭ್ಯಾಸ ವರ್ಗಗಳನ್ನು ನಡೆಸಿ ಸಂಸ್ಕಾರ ನೀಡುತ್ತಿದೆ’ ಎಂದರು.</p>.<p>ಉಪನ್ಯಾಸಕ ಶರಣುನಾಯಕ ಮಾತನಾಡಿ, ‘ಎಬಿವಿಪಿ 77 ವರ್ಷಗಳ ಸುದೀರ್ಘ ಸೇವೆಯಲ್ಲಿ ವಿದ್ಯಾರ್ಥಿಗಳ ನೆರವಿಗೆ ನಿಂತಿದೆ. ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ, ನಾಯಕತ್ವ ಗುಣಗಳನ್ನು ಕೊಡುತ್ತಿದೆ’ ಎಂದರು.</p>.<p>ಪ್ರಾಚಾರ್ಯ ಕೆ.ಕೆ. ರಾಠೋಡ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಪ್ರಶಾಂತ ಮಾಲಿಪಾಟೀಲ, ಧರ್ಮರಾಜ ಪಿಳಬಂಟ, ರಾಜಪ್ಪ ಅಜ್ಜಕೊಲ್ಲಿ, ವಾಹಿದ್, ಅನಿತಾ ವೇದಿಕೆಯಲ್ಲಿದ್ದರು.</p>.<p>ಎಬಿವಿಪಿ ತಾಲ್ಲೂಕು ಸಂಚಾಲಕ ವಿನೋದ, ಕಾರ್ಯದರ್ಶಿ ದೇವರಾಜ ನಾಟೇಕಾರ, ರಾಜು ಕರಡಕಲ್, ಮೌನೇಶ, ನರಸಿಂಹ, ದೀಪಿಕಾ, ಕನ್ನಿಕಾ, ಮೇಘನಾ, ಸಂಗಮೇಶ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ಯುವಕರಲ್ಲಿ ದೇಶಾಭಿಮಾನ ಮೂಡಿಸುವಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು (ಎಬಿವಿಪಿ) ವಿದ್ಯಾರ್ಥಿ ಸಂಘಟನೆ ಮುಂಚೂಣಿಯಲ್ಲಿದೆ’ ಎಂದು ಪರಿಷತ್ನ ರಾಜ್ಯ ಸಮಿತಿ ಉಪಾಧ್ಯಕ್ಷ ಉಪೇಂದ್ರನಾಯಕ ಸುಬೇದಾರ ಹೇಳಿದರು.</p>.<p>ನಗರದ ಪ್ರಭು ಮತ್ತು ಬೋಹರಾ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಎಬಿವಿಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ದೇಶದ ಅತಿ ದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿದೆ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಹೋರಾಟ ರೂಪಿಸಿ ಪರಿಹಾರ ದೊರಕಿಸಿದ ಶ್ರೇಯಸ್ಸು ಸಂಘಟನೆಗೆ ಇದೆ. ನಿರಂತರವಾಗಿ ಅಭ್ಯಾಸ ವರ್ಗಗಳನ್ನು ನಡೆಸಿ ಸಂಸ್ಕಾರ ನೀಡುತ್ತಿದೆ’ ಎಂದರು.</p>.<p>ಉಪನ್ಯಾಸಕ ಶರಣುನಾಯಕ ಮಾತನಾಡಿ, ‘ಎಬಿವಿಪಿ 77 ವರ್ಷಗಳ ಸುದೀರ್ಘ ಸೇವೆಯಲ್ಲಿ ವಿದ್ಯಾರ್ಥಿಗಳ ನೆರವಿಗೆ ನಿಂತಿದೆ. ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ, ನಾಯಕತ್ವ ಗುಣಗಳನ್ನು ಕೊಡುತ್ತಿದೆ’ ಎಂದರು.</p>.<p>ಪ್ರಾಚಾರ್ಯ ಕೆ.ಕೆ. ರಾಠೋಡ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಪ್ರಶಾಂತ ಮಾಲಿಪಾಟೀಲ, ಧರ್ಮರಾಜ ಪಿಳಬಂಟ, ರಾಜಪ್ಪ ಅಜ್ಜಕೊಲ್ಲಿ, ವಾಹಿದ್, ಅನಿತಾ ವೇದಿಕೆಯಲ್ಲಿದ್ದರು.</p>.<p>ಎಬಿವಿಪಿ ತಾಲ್ಲೂಕು ಸಂಚಾಲಕ ವಿನೋದ, ಕಾರ್ಯದರ್ಶಿ ದೇವರಾಜ ನಾಟೇಕಾರ, ರಾಜು ಕರಡಕಲ್, ಮೌನೇಶ, ನರಸಿಂಹ, ದೀಪಿಕಾ, ಕನ್ನಿಕಾ, ಮೇಘನಾ, ಸಂಗಮೇಶ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>