<p><strong>ಶಹಾಪುರ</strong>: ‘ದೇವು ಪತ್ತಾರ ಅವರ ಈಶಾನ್ಯ ಒಡಲು ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಲಭಿಸಿರುವುದು ಸಗರನಾಡಿನ ಹಿರಿಮೆ ಹೆಚ್ಚಿಸಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ರವೀಂದ್ರನಾಥ ಹೊಸಮನಿ, ಗೌರವ ಕಾರ್ಯದರ್ಶಿ ರಾಘವೇಂದ್ರ ಹಾರಣಗೇರಾ ಹರ್ಷ ವ್ಯಕ್ತಪಡಿಸಿದ್ದಾರೆ.</p>.<p>ಈ ಕುರಿತು ಮಾತನಾಡಿದ ಅವರು, ಗ್ರಾಮೀಣ ಪ್ರತಿಭೆಯಾಗಿರುವ ದೇವು ಪತ್ತಾರ ಅವರು, ತಾಲ್ಲೂಕಿನ ಅಣಬಿ ಗ್ರಾಮದಲ್ಲಿ 1 ರಿಂದ 3ನೇ ತರಗತಿಯವರೆಗೆ ಹಾಗೂ 3 ರಿಂದ 7ನೇ ತರಗತಿಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಪೇಟದಲ್ಲಿ ಮತ್ತು ಪ್ರೌಢ ಶಿಕ್ಷಣವನ್ನು ನಗರದ ಸರ್ಕಾರಿ ಶಾಲೆಯಲ್ಲಿ ಪೂರೈಸಿದ್ದಾರೆ.</p>.<p>ಪತ್ರಕರ್ತರಾಗಿ ಸಾಹಿತ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಈಶಾನ್ಯ ಒಡಲು ಕೃತಿಯಲ್ಲಿ ನಮ್ಮ ಕಲ್ಯಾಣ ಕರ್ನಾಟದ ಸಮಸ್ಯೆ ಹಾಗೂ ಸವಾಲುಗಳಿಗೆ ಮುಖಾಮುಖಿಯಾಗಿದ್ದಾರೆ ಎಂದು ತಿಳಿಸಿದರು.</p>.<p>ಸಗರನಾಡಿನಲ್ಲಿ ಪತ್ರಕರ್ತರಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಏಕೈಕ ವ್ಯಕ್ತಿ ಎನ್ನುವ ಹಿರಿಮೆಗೆ ಭಾಜನರಾಗಿದ್ದಾರೆ. ಪ್ರಶಸ್ತಿ ಲಭಿಸಿರುವುದಕ್ಕೆ ಶಹಾಪುರ ತಾಲ್ಲೂಕಿನ ಸಾಹಿತ್ಯ ಆಸಕ್ತರು ಸಂಭ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ</strong>: ‘ದೇವು ಪತ್ತಾರ ಅವರ ಈಶಾನ್ಯ ಒಡಲು ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಲಭಿಸಿರುವುದು ಸಗರನಾಡಿನ ಹಿರಿಮೆ ಹೆಚ್ಚಿಸಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ರವೀಂದ್ರನಾಥ ಹೊಸಮನಿ, ಗೌರವ ಕಾರ್ಯದರ್ಶಿ ರಾಘವೇಂದ್ರ ಹಾರಣಗೇರಾ ಹರ್ಷ ವ್ಯಕ್ತಪಡಿಸಿದ್ದಾರೆ.</p>.<p>ಈ ಕುರಿತು ಮಾತನಾಡಿದ ಅವರು, ಗ್ರಾಮೀಣ ಪ್ರತಿಭೆಯಾಗಿರುವ ದೇವು ಪತ್ತಾರ ಅವರು, ತಾಲ್ಲೂಕಿನ ಅಣಬಿ ಗ್ರಾಮದಲ್ಲಿ 1 ರಿಂದ 3ನೇ ತರಗತಿಯವರೆಗೆ ಹಾಗೂ 3 ರಿಂದ 7ನೇ ತರಗತಿಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಪೇಟದಲ್ಲಿ ಮತ್ತು ಪ್ರೌಢ ಶಿಕ್ಷಣವನ್ನು ನಗರದ ಸರ್ಕಾರಿ ಶಾಲೆಯಲ್ಲಿ ಪೂರೈಸಿದ್ದಾರೆ.</p>.<p>ಪತ್ರಕರ್ತರಾಗಿ ಸಾಹಿತ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಈಶಾನ್ಯ ಒಡಲು ಕೃತಿಯಲ್ಲಿ ನಮ್ಮ ಕಲ್ಯಾಣ ಕರ್ನಾಟದ ಸಮಸ್ಯೆ ಹಾಗೂ ಸವಾಲುಗಳಿಗೆ ಮುಖಾಮುಖಿಯಾಗಿದ್ದಾರೆ ಎಂದು ತಿಳಿಸಿದರು.</p>.<p>ಸಗರನಾಡಿನಲ್ಲಿ ಪತ್ರಕರ್ತರಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಏಕೈಕ ವ್ಯಕ್ತಿ ಎನ್ನುವ ಹಿರಿಮೆಗೆ ಭಾಜನರಾಗಿದ್ದಾರೆ. ಪ್ರಶಸ್ತಿ ಲಭಿಸಿರುವುದಕ್ಕೆ ಶಹಾಪುರ ತಾಲ್ಲೂಕಿನ ಸಾಹಿತ್ಯ ಆಸಕ್ತರು ಸಂಭ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>