ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಹೆಚ್ಚಿನ ಹೊಣೆಗಾರಿಕೆ ಇದೆ. ಗ್ರಾಮದಲ್ಲಿ ಸೋಂಕು ಪಸರಿದಂತೆ ಸ್ವಚ್ಛತೆ, ಜಾಗೃತಿ ಮೂಡಿಸಬೇಕು. ಸೋಂಕಿತರು ಬೇಕಾಬಿಟ್ಟಿ ಓಡಾಡದಂತೆ ನೋಡಿಕೊಳ್ಳಬೇಕು. ಹೋಂ ಕ್ವಾರಂಟೈನ್ನಲ್ಲಿ ಇರಿಸಬೇಕು. ನಕಲಿ ವೈದ್ಯರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಗನಾಥಮೂರ್ತಿ, ತಹಶೀಲ್ದಾರ ಜಗನಾಥರಡ್ಡಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ರಮೇಶ ಗುತ್ತೆದಾರ್, ಪೌರಾಯುಕ್ತ ರಮೇಶ ಪಟ್ಟೆದಾರ ಅವರಿಗೆ ಸೂಚಿಸಿದರು.