ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ನೀಡಿದ ಲಿಖಿತ ಉತ್ತರಕ್ಕೆ ಪ್ರತಿಕ್ರಿಯಿಸಿದ ಅವರು, ‘ಗುರುಮಠಕಲ್ ಪಟ್ಟಣದಲ್ಲಿಸರ್ಕಾರಿ ಕಚೇರಿಗಳ ಸ್ಥಾಪನೆ ಅವಶ್ಯಕತೆ ಇದ್ದರೂ, ಸರ್ಕಾರದ ಗಮನಕ್ಕೆ ಬಂದಿಲ್ಲವೇ? ಎಂದು ಪ್ರಶ್ನಿಸಿದರು.
‘2017–18ನೇ ಸಾಲಿನ ಆಯವ್ಯಯದಲ್ಲಿ ರಾಜ್ಯಾದ್ಯಂತ ಒಟ್ಟು 50 ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಿದ್ದು, ಈ ತಾಲ್ಲೂಕುಗಳಲ್ಲಿ ಕಂದಾಯ ಇಲಾಖೆಯಿಂದ ಈಗಾಗಲೇ ಕಚೇರಿಗಳನ್ನು ಆರಂಭಿಸಲಾಗಿದೆ. ಇತರೆ ಇಲಾಖೆಗಳ ಕಚೇರಿಗಳನ್ನು ಹಣಕಾಸು ಇಲಾಖೆಯ ಸಹಕಾರದೊಂದಿಗೆ ಹಂತಹಂತವಾಗಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಸಚಿವ ದೇಶಪಾಂಡೆ ಉತ್ತರಿಸಿದರು.