<p><strong>ಸುರಪುರ: ‘</strong>ಚಟುವಟಿಕೆ ಆಧಾರಿತ ಬೋಧನೆಯಿಂದ ಮಕ್ಕಳಲ್ಲಿ ಪಾಠದ ತಿರುಳು ನೆನಪಿನಲ್ಲಿ ಉಳಿಯುತ್ತದೆ. ಇದರಿಂದ ಮಕ್ಕಳು ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ತೆಗೆದುಕೊಳ್ಳಲು ನೆರವಾಗುತ್ತದೆ’ ಎಂದು ಕಲಬುರಗಿಯ ನಿವೃತ್ತ ಉಪನ್ಯಾಸಕ ಮಲ್ಲಿಕಾರ್ಜುನ ಪಾಟೀಲ ಹೇಳಿದರು.</p>.<p>ನಗರದ ಶರಣಬಸವ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಮಕ್ಕಳ ಮತ್ತು ಶಿಕ್ಷಕರ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತರಗತಿ ಕೋಣೆಯಲ್ಲಿ ಮಕ್ಕಳಿಗೆ ಖುದ್ದಾಗಿ ಘಟಕ ಪರೀಕ್ಷೆಯನ್ನು ತೆಗೆದುಕೊಂಡು, ಮಕ್ಕಳ ಅಂಕಗಳ ಆಧಾರದ ಮೇಲೆ ಹೇಗೆ ಬರೆಯಬೇಕು. ನಿಗದಿತ ಅವಧಿಯಲ್ಲಿ ಉತ್ತರಿಸುವ ಕ್ರಮಗಳ ತಯಾರಿ ಕುರಿತು ಸಲಹೆ ನೀಡಿದರು.</p>.<p>ಶಿಕ್ಷಕರು ಚಿತ್ರಪಟಗಳ ಬಳಕೆ, ವಸ್ತುಗಳ ಬಳಕೆ, ಮಾದರಿಗಳನ್ನು ಬಳಸುವ ಮೂಲಕ ವಿದ್ಯಾರ್ಥಿಗಳ ಬುದ್ದಿಮಟ್ಟವನ್ನು ಹೆಚ್ಚಿಸಬಹುದು ಎಂದು ತಿಳಿಸಿದರು.</p>.<p> ಶಿಕ್ಷಕರು ಮಕ್ಕಳ ಫಲಿತಾಂಶದ ಅಭಿವೃದ್ಧಿಗಾಗಿ ನಿರ್ವಹಿಸಬೇಕಾದ ಕ್ರಮಗಳನ್ನು ತಿಳಿಸಿಕೊಟ್ಟರು. </p>.<p>ಕಾಲೇಜಿನ ಜಂಟಿ ಕಾರ್ಯದರ್ಶಿ ದೊಡ್ಡಪ್ಪ ನಿಷ್ಠಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ: ‘</strong>ಚಟುವಟಿಕೆ ಆಧಾರಿತ ಬೋಧನೆಯಿಂದ ಮಕ್ಕಳಲ್ಲಿ ಪಾಠದ ತಿರುಳು ನೆನಪಿನಲ್ಲಿ ಉಳಿಯುತ್ತದೆ. ಇದರಿಂದ ಮಕ್ಕಳು ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ತೆಗೆದುಕೊಳ್ಳಲು ನೆರವಾಗುತ್ತದೆ’ ಎಂದು ಕಲಬುರಗಿಯ ನಿವೃತ್ತ ಉಪನ್ಯಾಸಕ ಮಲ್ಲಿಕಾರ್ಜುನ ಪಾಟೀಲ ಹೇಳಿದರು.</p>.<p>ನಗರದ ಶರಣಬಸವ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಮಕ್ಕಳ ಮತ್ತು ಶಿಕ್ಷಕರ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತರಗತಿ ಕೋಣೆಯಲ್ಲಿ ಮಕ್ಕಳಿಗೆ ಖುದ್ದಾಗಿ ಘಟಕ ಪರೀಕ್ಷೆಯನ್ನು ತೆಗೆದುಕೊಂಡು, ಮಕ್ಕಳ ಅಂಕಗಳ ಆಧಾರದ ಮೇಲೆ ಹೇಗೆ ಬರೆಯಬೇಕು. ನಿಗದಿತ ಅವಧಿಯಲ್ಲಿ ಉತ್ತರಿಸುವ ಕ್ರಮಗಳ ತಯಾರಿ ಕುರಿತು ಸಲಹೆ ನೀಡಿದರು.</p>.<p>ಶಿಕ್ಷಕರು ಚಿತ್ರಪಟಗಳ ಬಳಕೆ, ವಸ್ತುಗಳ ಬಳಕೆ, ಮಾದರಿಗಳನ್ನು ಬಳಸುವ ಮೂಲಕ ವಿದ್ಯಾರ್ಥಿಗಳ ಬುದ್ದಿಮಟ್ಟವನ್ನು ಹೆಚ್ಚಿಸಬಹುದು ಎಂದು ತಿಳಿಸಿದರು.</p>.<p> ಶಿಕ್ಷಕರು ಮಕ್ಕಳ ಫಲಿತಾಂಶದ ಅಭಿವೃದ್ಧಿಗಾಗಿ ನಿರ್ವಹಿಸಬೇಕಾದ ಕ್ರಮಗಳನ್ನು ತಿಳಿಸಿಕೊಟ್ಟರು. </p>.<p>ಕಾಲೇಜಿನ ಜಂಟಿ ಕಾರ್ಯದರ್ಶಿ ದೊಡ್ಡಪ್ಪ ನಿಷ್ಠಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>