ಜಂಟಿ ತಂಡ ರಚನೆ:ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ನಿರ್ಣಯ ಕೈಗೊಂಡಂತೆ ಜಿಲ್ಲೆಯ ಹೋಬಳಿ ಮಟ್ಟ, ತಾಲ್ಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳನ್ನು ಒಳಗೊಂಡ ಜಂಟಿ ತಂಡ ರಚಿಸಲಾಗಿದೆ. ರೈತರ ಜಮೀನಿನಲ್ಲಿ ನಿಂತಿರುವ ಬೆಳೆಗಳು ಇರುವೆಡೆ ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತು ಮಿಡತೆಯಿಂದ ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಕ್ಷೇತ್ರಗಳ ರಕ್ಷಣೆ ಕುರಿತು ಅರಿವು ಮೂಡಿಸುವುದು ಜಂಟಿ ತಂಡದ ಜವಾಬ್ದಾರಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.