‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಪೂರೈಸಿದರೂ ಅಭಿವೃದ್ಧಿ ಕಾಮಗಾರಿಗಳಿಗೆ ನಯಾ ಪೈಸೆ ಅನುದಾನ ನೀಡಿಲ್ಲ. ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ನೀರಾವರಿ ಹೀಗೆ ಹಲವಾರು ಪ್ರಮುಖ ಇಲಾಖೆಗಳಿಗೆ ಅನುದಾನ ಬಂದಿಲ್ಲ. ಆದರೆ, ಬಿಜೆಪಿ ಶಾಸಕರು ಇರುವ ಸುರಪುರ ಮತ್ತು ದೇವದುರ್ಗ ಕ್ಷೇತ್ರಗಳಿಗೆ ₹100 ಕೋಟಿ ಅನುದಾನ ನೀಡಿದ್ದಾರೆ. ತಾರತಮ್ಯ ನೀತಿ ಕೈಬಿಡಿ. ರಾಜ್ಯದ ಎಲ್ಲಾ ತಾಲ್ಲೂಕು ಕ್ಷೇತ್ರಗಳು ಅಭಿವೃದ್ಧಿ ಹೊಂದಿದರೆ ಮಾತ್ರ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯ’ ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ಟೀಕಿಸಿದರು.