<p><strong>ಶಹಾಪುರ</strong>: ಜನಸಂಖ್ಯೆ ಹೆಚ್ಚಾದಂತೆ ವಾಹನಗಳ ಸಂಖ್ಯೆ ಅಧಿಕವಾಗುತ್ತಲಿದೆ. ಅದರ ಜೊತೆಯಲ್ಲಿ ರಸ್ತೆ ಅಪಘಾತಗಳು ಏರುಮುಖವಾಗಿವೆ. ಇವೆಲ್ಲವುಗಳಿಗೆ ಪರಿಹಾರವೆಂದರೆ ರಸ್ತೆ ಸುರಕ್ಷತೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸುರಪುರ ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ತಿಳಿಸಿದರು.</p>.<p>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಪೊಲೀಸ್ ಇಲಾಖೆ ಹಾಗೂ ಶಹಾಪುರ ಠಾಣೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಪ್ತಾಹ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಂಚಾರ ನಿಯಮದ ಜೊತೆಯಲ್ಲಿ ಕಡ್ಡಾಯವಾಗಿ ವಾಹನದ ವಿಮೆ ಹೊಂದಿರಬೇಕು. ವಾಹನದ ಚಾಲನಾ ಪರವಾನಗಿ ಅಗತ್ಯವಾಗಿದೆ. ಅದರಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ₹10 ಸಾವಿರ ದಂಡ ವಿಧಿಸಲಾಗುತ್ತದೆ. ವಾಹನ ಚಲಾಯಿಸುವಾಗ ಮೊಬೈಲ್ ಚಲಾವಣೆ ಅತ್ಯಂತ ಅಪಾಯಕಾರಿಯಾಗಿದೆ ಎಂದು ಅವರು ಎಚ್ಚರಿಕೆ ನೀಡಿದರು.</p>.<p>ಕಾಲೇಜಿನ ಪ್ರಾಚಾರ್ಯ ಪ್ರೊ.ಚೆನ್ನಾರಡ್ಡಿ ಪಾಟೀಲ ತಂಗಡಗಿ, ಪೊಲೀಸ್ ಇನ್ಸ್ಪೆಕ್ಟರ್ ಚೆನ್ನಯ್ಯ ಹಿರೇಮಠ, ಆನಂದ ಜೋಷಿ, ಸೂರ್ಯಕಾಂತ ಡಾ.ನಾಗಪ್ಪ ಚೌವಳಕರ್, ಡಾ.ಸಂಘರ್ಷ, ಡಾ.ಬಸಂತ ಸಾಗರ, ಮಹೇಶ ಪತ್ತಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ</strong>: ಜನಸಂಖ್ಯೆ ಹೆಚ್ಚಾದಂತೆ ವಾಹನಗಳ ಸಂಖ್ಯೆ ಅಧಿಕವಾಗುತ್ತಲಿದೆ. ಅದರ ಜೊತೆಯಲ್ಲಿ ರಸ್ತೆ ಅಪಘಾತಗಳು ಏರುಮುಖವಾಗಿವೆ. ಇವೆಲ್ಲವುಗಳಿಗೆ ಪರಿಹಾರವೆಂದರೆ ರಸ್ತೆ ಸುರಕ್ಷತೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸುರಪುರ ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ತಿಳಿಸಿದರು.</p>.<p>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಪೊಲೀಸ್ ಇಲಾಖೆ ಹಾಗೂ ಶಹಾಪುರ ಠಾಣೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಪ್ತಾಹ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಂಚಾರ ನಿಯಮದ ಜೊತೆಯಲ್ಲಿ ಕಡ್ಡಾಯವಾಗಿ ವಾಹನದ ವಿಮೆ ಹೊಂದಿರಬೇಕು. ವಾಹನದ ಚಾಲನಾ ಪರವಾನಗಿ ಅಗತ್ಯವಾಗಿದೆ. ಅದರಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ₹10 ಸಾವಿರ ದಂಡ ವಿಧಿಸಲಾಗುತ್ತದೆ. ವಾಹನ ಚಲಾಯಿಸುವಾಗ ಮೊಬೈಲ್ ಚಲಾವಣೆ ಅತ್ಯಂತ ಅಪಾಯಕಾರಿಯಾಗಿದೆ ಎಂದು ಅವರು ಎಚ್ಚರಿಕೆ ನೀಡಿದರು.</p>.<p>ಕಾಲೇಜಿನ ಪ್ರಾಚಾರ್ಯ ಪ್ರೊ.ಚೆನ್ನಾರಡ್ಡಿ ಪಾಟೀಲ ತಂಗಡಗಿ, ಪೊಲೀಸ್ ಇನ್ಸ್ಪೆಕ್ಟರ್ ಚೆನ್ನಯ್ಯ ಹಿರೇಮಠ, ಆನಂದ ಜೋಷಿ, ಸೂರ್ಯಕಾಂತ ಡಾ.ನಾಗಪ್ಪ ಚೌವಳಕರ್, ಡಾ.ಸಂಘರ್ಷ, ಡಾ.ಬಸಂತ ಸಾಗರ, ಮಹೇಶ ಪತ್ತಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>