<p><strong>ಯಾದಗಿರಿ: </strong>‘ಡ್ರೈವಿಂಗ್ ಶಾಲೆಯ ಮಾಲೀಕರು ತಾವು ಸಂಚಾರ ನಿಯಮಗಳನ್ನು ತಿಳಿದುಕೊಂಡು ಚಾಲನೆಗೆ ಬರುವವರಿಗೆ ಕಡ್ಡಾಯವಾಗಿ ತಿಳಿವಳಿಕೆ ನೀಡಬೇಕು' ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ದಾಮೋದರ ಹೇಳಿದರು.</p>.<p>ನಗರದ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲಿಕರ ಅಸೋಸಿಯೇಷನ್ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ನಿಯಮಗಳು ಗೊತ್ತಿಲ್ಲದಿದ್ದರೆ ಹಲವಾರು ಜನರ ಪ್ರಾಣಕ್ಕೆ ಕಂಟಕವಾಗುತ್ತದೆ. ಇದರಿಂದ ಕುಟುಂಬಗಳು ಅನಾಥವಾಗುತ್ತವೆ. ರಸ್ತೆ ಸುರಕ್ಷಾ ಸಪ್ತಾಹದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಈ ಬಗ್ಗೆ ಅರಿವು ಮೂಡಿಸಲಾಗಿದೆ. ದೂರುಗಳಿಗೆ ಆಸ್ಪದೆ ಕೊಡದೇ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಮೆಹಬೂಬ್ ಅಲಿ ಮಾತನಾಡಿ, ‘ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ 6 ತಿಂಗಳಲ್ಲಿ 13 ಮಂದಿ ರಸ್ತೆ ಅಪಘಾತದಲ್ಲಿ ಬಲಿಯಾಗಿದ್ದಾರೆ. ಇದರಲ್ಲಿ 7 ಜನರಿಗೆ ವಿಮೆ ಇಲ್ಲ. 4 ಜನರಿಗೆ ಚಾಲನಾ ಪರವಾನಗಿ ಇಲ್ಲ. ಇದರಿಂದ ಎಲ್ಲ ಚಾಲಕರಿಗೆಜಾಗೃತಿ ಮೂಡಿಸಬೇಕು. ವಿಮೆಮಾಡಿಸದಿದ್ದರೆ ಆಸ್ತಿ ಜಪ್ತಿ ಮಾಡಿ ಪರಿಹಾರ ಕೊಡಿಸಲು ಅವಕಾಶವಿದೆ. ಹೀಗಾಗಿ ಎಲ್ಲರೂ ಸೂಕ್ತ ದಾಖಲಾತಿ ಪಡೆದು ಚಾಲನೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲಿಕರ ಅಸೋಸಿಯೇಷನ್ ಅಧ್ಯಕ್ಷ ಯಲ್ಲಪ್ಪ ದೊಡಮನಿ ಪ್ರಾಸ್ತಾವಿಕವಾಗಿ ಮಾತನಾಡಿ, ‘ಸಂಚಾರ ನಿಯಮಗಳನ್ನು ಪಾಲಿಸುವುದರ ಜೊತೆಗೆ ಚಾಲನೆ ಕಲಿಯಲು ಬಂದವರಿಗೆ ತಿಳಿಸಬೇಕಿದೆ. ಅಲ್ಲದೇ ಚಾಲನಾ ಪರವಾನಗಿ ಸೇರಿದಂತೆ ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕಿದೆ’ ಎಂದು ಚಾಲಕರಿಗೆ ಸಲಹೆ ನೀಡಿದರು.</p>.<p>ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇಂದೂಧರ ಸಿನ್ನೂರ ಡ್ರೈವಿಂಗ್ ಶಾಲೆಯ ಮಾಲೀಕರು ಕಲಿಕೆಗೆ ಬರುವವರಿಗೆ ಸಂಚಾರ ನಿಮಯಗಳನ್ನು ತಿಳಿಸಿ ಚಾಲನೆ ಕಲಿಸಿಕೊಡಬೇಕು ಎಂದರು.</p>.<p>ಸಿಎಂಡಿಎಸ್ ಮಾಲಿಕ ಶಂಕರ ಸಿಂಘೆ, ಶಿವಸಾಯಿ ಡ್ರೈವಿಂಗ್ ಸ್ಕೂಲ್ ಮಾಲಿಕ ನರಸಯ್ಯ ಕಲಾಲ, ಡ್ರೈವಿಂಗ್ ಸ್ಕೂಲ್ ಸಹಕಾರ್ಯದರ್ಶಿ ಬಸಯ್ಯ ಸ್ವಾಮಿ, ಉಪಾಧ್ಯಕ್ಷ ಬುಬೇರ್ ಹೈಮದ್, ಪ್ರಧಾನ ಕಾರ್ಯದರ್ಶಿ ತಿಪ್ಪಣ್ಣ ನಾಯ್ಕೋಡಿ, ಇರ್ಫಾನ್ ಪಟೇಲ್ ಸೇರಿದಂತೆ ಹಲವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>‘ಡ್ರೈವಿಂಗ್ ಶಾಲೆಯ ಮಾಲೀಕರು ತಾವು ಸಂಚಾರ ನಿಯಮಗಳನ್ನು ತಿಳಿದುಕೊಂಡು ಚಾಲನೆಗೆ ಬರುವವರಿಗೆ ಕಡ್ಡಾಯವಾಗಿ ತಿಳಿವಳಿಕೆ ನೀಡಬೇಕು' ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ದಾಮೋದರ ಹೇಳಿದರು.</p>.<p>ನಗರದ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲಿಕರ ಅಸೋಸಿಯೇಷನ್ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ನಿಯಮಗಳು ಗೊತ್ತಿಲ್ಲದಿದ್ದರೆ ಹಲವಾರು ಜನರ ಪ್ರಾಣಕ್ಕೆ ಕಂಟಕವಾಗುತ್ತದೆ. ಇದರಿಂದ ಕುಟುಂಬಗಳು ಅನಾಥವಾಗುತ್ತವೆ. ರಸ್ತೆ ಸುರಕ್ಷಾ ಸಪ್ತಾಹದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಈ ಬಗ್ಗೆ ಅರಿವು ಮೂಡಿಸಲಾಗಿದೆ. ದೂರುಗಳಿಗೆ ಆಸ್ಪದೆ ಕೊಡದೇ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಮೆಹಬೂಬ್ ಅಲಿ ಮಾತನಾಡಿ, ‘ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ 6 ತಿಂಗಳಲ್ಲಿ 13 ಮಂದಿ ರಸ್ತೆ ಅಪಘಾತದಲ್ಲಿ ಬಲಿಯಾಗಿದ್ದಾರೆ. ಇದರಲ್ಲಿ 7 ಜನರಿಗೆ ವಿಮೆ ಇಲ್ಲ. 4 ಜನರಿಗೆ ಚಾಲನಾ ಪರವಾನಗಿ ಇಲ್ಲ. ಇದರಿಂದ ಎಲ್ಲ ಚಾಲಕರಿಗೆಜಾಗೃತಿ ಮೂಡಿಸಬೇಕು. ವಿಮೆಮಾಡಿಸದಿದ್ದರೆ ಆಸ್ತಿ ಜಪ್ತಿ ಮಾಡಿ ಪರಿಹಾರ ಕೊಡಿಸಲು ಅವಕಾಶವಿದೆ. ಹೀಗಾಗಿ ಎಲ್ಲರೂ ಸೂಕ್ತ ದಾಖಲಾತಿ ಪಡೆದು ಚಾಲನೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲಿಕರ ಅಸೋಸಿಯೇಷನ್ ಅಧ್ಯಕ್ಷ ಯಲ್ಲಪ್ಪ ದೊಡಮನಿ ಪ್ರಾಸ್ತಾವಿಕವಾಗಿ ಮಾತನಾಡಿ, ‘ಸಂಚಾರ ನಿಯಮಗಳನ್ನು ಪಾಲಿಸುವುದರ ಜೊತೆಗೆ ಚಾಲನೆ ಕಲಿಯಲು ಬಂದವರಿಗೆ ತಿಳಿಸಬೇಕಿದೆ. ಅಲ್ಲದೇ ಚಾಲನಾ ಪರವಾನಗಿ ಸೇರಿದಂತೆ ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕಿದೆ’ ಎಂದು ಚಾಲಕರಿಗೆ ಸಲಹೆ ನೀಡಿದರು.</p>.<p>ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇಂದೂಧರ ಸಿನ್ನೂರ ಡ್ರೈವಿಂಗ್ ಶಾಲೆಯ ಮಾಲೀಕರು ಕಲಿಕೆಗೆ ಬರುವವರಿಗೆ ಸಂಚಾರ ನಿಮಯಗಳನ್ನು ತಿಳಿಸಿ ಚಾಲನೆ ಕಲಿಸಿಕೊಡಬೇಕು ಎಂದರು.</p>.<p>ಸಿಎಂಡಿಎಸ್ ಮಾಲಿಕ ಶಂಕರ ಸಿಂಘೆ, ಶಿವಸಾಯಿ ಡ್ರೈವಿಂಗ್ ಸ್ಕೂಲ್ ಮಾಲಿಕ ನರಸಯ್ಯ ಕಲಾಲ, ಡ್ರೈವಿಂಗ್ ಸ್ಕೂಲ್ ಸಹಕಾರ್ಯದರ್ಶಿ ಬಸಯ್ಯ ಸ್ವಾಮಿ, ಉಪಾಧ್ಯಕ್ಷ ಬುಬೇರ್ ಹೈಮದ್, ಪ್ರಧಾನ ಕಾರ್ಯದರ್ಶಿ ತಿಪ್ಪಣ್ಣ ನಾಯ್ಕೋಡಿ, ಇರ್ಫಾನ್ ಪಟೇಲ್ ಸೇರಿದಂತೆ ಹಲವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>