<p><strong>ಯಾದಗಿರಿ:</strong> ‘ಮಕ್ಕಳ ಸಾಕ್ಷರತೆ ಹೆಚ್ಚಿಸಿದರೆ ಮೂಢನಂಬಿಕೆ ಹೋಗಲಾಡಿಸಬಹುದು. ಆ ನಿಟ್ಟಿನಲ್ಲಿ ಮಕ್ಕಳನ್ನು ಸಂರಕ್ಷಣೆ ಮಾಡಬೇಕಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಹೇಳಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಕೆಎಸ್ಆರ್ಡಿಪಿಆರ್ಯು- ಮಕ್ಕಳ ಹಕ್ಕುಗಳು ಮತ್ತು ಆಡಳಿತ ಕೋಶ, ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಅಧಿನಿಯಮ ಹಾಗೂ ಮಕ್ಕಳ ಸಂರಕ್ಷಣೆ ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಹಾಗೂ ನಾಗರಿಕ ಸಂಸ್ಥೆಗಳ ಸಹಭಾಗಿತ್ವ ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಕ್ಕಳ ಹಕ್ಕುಗಳ ಗ್ರಾಮ ಸಭೆಗಳನ್ನು ನಡೆಸುವ ಮೂಲಕ ಅವರಿಗೆ ತಮ್ಮ ಅಭಿಪ್ರಾಯ, ಸಮಸ್ಯೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ವಾತಾವರಣ ಕಲ್ಪಿಸಿ ಅವರ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಬೇಕಾಗಿದೆ’ ಎಂದು ತಿಳಿಸಿದರು.</p>.<p>ಕಾರ್ಯಾಗಾರದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ತಿದ್ದುಪಡಿ ಹಿನ್ನಲೆಯಲ್ಲಿ ಮಕ್ಕಳ ಸಂರಕ್ಷಣೆಯ ಕಾರ್ಯ ವಿಧಾನಗಳ ಅನುಷ್ಠಾನದಲ್ಲಿ ವಿವಿಧ ಇಲಾಖೆಗಲು ಮತ್ತು ನಾಗರಿಕ ಸಂಘ-ಸಂಸ್ಥೆಗಳ ಸಹಭಾಗಿತ್ವ, ಸಮನ್ವಯತೆ, ಸಹಕಾರ ಮತ್ತು ಭಾಗವಹಿಸುವಿಕೆಯ ಮಂಡನೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಬಗ್ಗೆ ಸಂಕ್ಷಿಪ್ತ ಪರಿಚಯ ಮತ್ತು ಅದರ ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಮತ್ತು ಅಧಿಕಾರಿಗಳ ಜವಾಬ್ದಾರಿ, ಪಾತ್ರಗಳ ಕುರಿತು ಉಪನ್ಯಾಸ ಹಾಗೂ ಚರ್ಚೆಗಳು ನಡೆದವು.</p>.<p>ಕೊಪ್ಪಳದ ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್, ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ಯುನಿಸೆಫ್ ಸಂಯೋಜಕ ಡಾ.ಕೆ.ಲೆನಿನ್ ಬಾಬು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.</p>.<p>ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಹಣಮಂತರಾಯ ಕರಡಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯಮಾಳಪ್ಪ ಎಸ್.ವಂಟೂರ್, ಬಾಲ ನ್ಯಾಯ ಮಂಡಳಿ ಸದಸ್ಯೆ ನಿರ್ಮಲಾದೇವಿ ಹೂಗಾರ ಇದ್ದರು. ಗದಗನ ಮಕ್ಕಳ ಹಕ್ಕುಗಳು ಮತ್ತು ಆಡಳಿತ ಕೋಶದ ಸಂಯೋಜಕ ಮುತ್ತುರಾಜ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ‘ಮಕ್ಕಳ ಸಾಕ್ಷರತೆ ಹೆಚ್ಚಿಸಿದರೆ ಮೂಢನಂಬಿಕೆ ಹೋಗಲಾಡಿಸಬಹುದು. ಆ ನಿಟ್ಟಿನಲ್ಲಿ ಮಕ್ಕಳನ್ನು ಸಂರಕ್ಷಣೆ ಮಾಡಬೇಕಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಹೇಳಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಕೆಎಸ್ಆರ್ಡಿಪಿಆರ್ಯು- ಮಕ್ಕಳ ಹಕ್ಕುಗಳು ಮತ್ತು ಆಡಳಿತ ಕೋಶ, ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಅಧಿನಿಯಮ ಹಾಗೂ ಮಕ್ಕಳ ಸಂರಕ್ಷಣೆ ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಹಾಗೂ ನಾಗರಿಕ ಸಂಸ್ಥೆಗಳ ಸಹಭಾಗಿತ್ವ ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಕ್ಕಳ ಹಕ್ಕುಗಳ ಗ್ರಾಮ ಸಭೆಗಳನ್ನು ನಡೆಸುವ ಮೂಲಕ ಅವರಿಗೆ ತಮ್ಮ ಅಭಿಪ್ರಾಯ, ಸಮಸ್ಯೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ವಾತಾವರಣ ಕಲ್ಪಿಸಿ ಅವರ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಬೇಕಾಗಿದೆ’ ಎಂದು ತಿಳಿಸಿದರು.</p>.<p>ಕಾರ್ಯಾಗಾರದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ತಿದ್ದುಪಡಿ ಹಿನ್ನಲೆಯಲ್ಲಿ ಮಕ್ಕಳ ಸಂರಕ್ಷಣೆಯ ಕಾರ್ಯ ವಿಧಾನಗಳ ಅನುಷ್ಠಾನದಲ್ಲಿ ವಿವಿಧ ಇಲಾಖೆಗಲು ಮತ್ತು ನಾಗರಿಕ ಸಂಘ-ಸಂಸ್ಥೆಗಳ ಸಹಭಾಗಿತ್ವ, ಸಮನ್ವಯತೆ, ಸಹಕಾರ ಮತ್ತು ಭಾಗವಹಿಸುವಿಕೆಯ ಮಂಡನೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಬಗ್ಗೆ ಸಂಕ್ಷಿಪ್ತ ಪರಿಚಯ ಮತ್ತು ಅದರ ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಮತ್ತು ಅಧಿಕಾರಿಗಳ ಜವಾಬ್ದಾರಿ, ಪಾತ್ರಗಳ ಕುರಿತು ಉಪನ್ಯಾಸ ಹಾಗೂ ಚರ್ಚೆಗಳು ನಡೆದವು.</p>.<p>ಕೊಪ್ಪಳದ ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್, ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ಯುನಿಸೆಫ್ ಸಂಯೋಜಕ ಡಾ.ಕೆ.ಲೆನಿನ್ ಬಾಬು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.</p>.<p>ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಹಣಮಂತರಾಯ ಕರಡಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯಮಾಳಪ್ಪ ಎಸ್.ವಂಟೂರ್, ಬಾಲ ನ್ಯಾಯ ಮಂಡಳಿ ಸದಸ್ಯೆ ನಿರ್ಮಲಾದೇವಿ ಹೂಗಾರ ಇದ್ದರು. ಗದಗನ ಮಕ್ಕಳ ಹಕ್ಕುಗಳು ಮತ್ತು ಆಡಳಿತ ಕೋಶದ ಸಂಯೋಜಕ ಮುತ್ತುರಾಜ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>