ಈ ಕುರಿತು ಹೇಳಿಕೆ ನೀಡಿರುವ ಅವರು, ಶುಕ್ರವಾರ ಸಂತೆಯ ದಿನ ಕೆಲ ವ್ಯಕ್ತಿಗಳು ಖುಲ್ಲಾ ಹತ್ತಿ ಬೀಜಗಳನ್ನು ತೆಗೆದುಕೊಂಡು ಬಂದು ರೈತರಿಗೆ ಮಾರಾಟ ಮಾಡುವ ಸಂಚು ನಡೆಸಿದ್ದಾರೆ. ಅಲ್ಲದೆ ಪಾಕೇಟ್ ಮೇಲೆ ವಿವಿಧ ಕಂಪನಿ ಹತ್ತಿ ಬೀಜ ಎಂದು ನಮೂದಿಸಿ ನಕಲಿ ಹತ್ತಿ ಬೀಜ ಮಾರಾಟ ಮಾಡುವ ಭೀತಿ ಇದೆ. ರೈತರು ಅಧಿಕೃತ ಅಂಗಡಿಯಲ್ಲಿ ಬೀಜವನ್ನು ತೆಗೆದುಕೊಳ್ಳಬೇಕು. ರಸೀದಿಯನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ರೈತರಿಗೆ ಮನವಿ ಮಾಡಿದ್ದಾರೆ.