ಈ ಕುರಿತು ಹೇಳಿಕೆ ನೀಡಿರುವ ಅವರು, ಎರಡು ವಾರಕ್ಕೂಹೆಚ್ಚುದಿನಗಳಿಂದ ರಾಜ್ಯದ ವಿದ್ಯಾರ್ಥಿಗಳು ಎಐಡಿಎಸ್ಒ ನೇತೃತ್ವದಲ್ಲಿ ಹೋರಾಟ ನಿರತರಾಗಿದ್ದಾರೆ. ಸಾವಿರಾರು ವಿದ್ಯಾರ್ಥಿಗಳು ಆನ್ಲೈನ್ ಚಳವಳಿಯಲ್ಲಿ ಪಾಲ್ಗೊಂಡಿದ್ದಾರೆ. ವಿದ್ಯಾರ್ಥಿಗಳು ಎತ್ತಿರುವ ಬೇಡಿಕೆಗಳ ಪರಿಣಾಮ ಸರ್ಕಾರ 20 ಜುಲೈ ರಂದು ಸಭೆ ಕರೆದಿದೆ. ಸಭೆಯಲ್ಲಿ ವಿದ್ಯಾರ್ಥಿಗಳ-ಪೋಷಕರ-ಶಿಕ್ಷಕರ ಹಿತದೃಷ್ಟಿಯಿಂದ ಸಿಇಟಿ ಮುಂದೂಡಬೇಕೆಂದು ಒತ್ತಾಯಿಸಿದ್ದಾರೆ.