ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ | ಕೆ-ಸೆಟ್‌ ಪರೀಕ್ಷೆ ಮುಂದೂಡಲು ಎಐಡಿಎಸ್‌ಒ ಆಗ್ರಹ

Last Updated 19 ಜುಲೈ 2020, 17:11 IST
ಅಕ್ಷರ ಗಾತ್ರ

ಯಾದಗಿರಿ: ಕೊರೊನಾ ಸಂಕಷ್ಟದಲ್ಲಿ ಕೆ-ಸೆಟ್‌ ಪರೀಕ್ಷೆ ನಡೆಸುವುದು ಬೇಡ. ಪರೀಕ್ಷೆಯನ್ನು ಮುಂದೂಡಿ ಎಂದು ಎಐಡಿಎಸ್‌ಒ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಪಿ.ಸೈದಪ್ಪ, ಕಾರ್ಯದರ್ಶಿ ಬಿ.ಕೆ.ಸುಭಾಶ್ಚಂದ್ರ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಎರಡು ವಾರಕ್ಕೂಹೆಚ್ಚುದಿನಗಳಿಂದ ರಾಜ್ಯದ ವಿದ್ಯಾರ್ಥಿಗಳು ಎಐಡಿಎಸ್‌ಒ ನೇತೃತ್ವದಲ್ಲಿ ಹೋರಾಟ ನಿರತರಾಗಿದ್ದಾರೆ. ಸಾವಿರಾರು ವಿದ್ಯಾರ್ಥಿಗಳು ಆನ್‍ಲೈನ್ ಚಳವಳಿಯಲ್ಲಿ ಪಾಲ್ಗೊಂಡಿದ್ದಾರೆ. ವಿದ್ಯಾರ್ಥಿಗಳು ಎತ್ತಿರುವ ಬೇಡಿಕೆಗಳ ಪರಿಣಾಮ ಸರ್ಕಾರ 20 ಜುಲೈ ರಂದು ಸಭೆ ಕರೆದಿದೆ. ಸಭೆಯಲ್ಲಿ ವಿದ್ಯಾರ್ಥಿಗಳ-ಪೋಷಕರ-ಶಿಕ್ಷಕರ ಹಿತದೃಷ್ಟಿಯಿಂದ ಸಿಇಟಿ ಮುಂದೂಡಬೇಕೆಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT