ಕೋಲ್ಕತ್ತದಲ್ಲಿ ಮಂಗಳವಾರ ನಡೆದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ರೋಡ್ ಷೋ ವೇಳೆ ಈಶ್ವರಚಂದ್ರ ವಿದ್ಯಾಸಾಗರರ ಪುತ್ಥಳಿ ಧ್ವಂಸ ಪ್ರಕರಣವನ್ನು ಖಂಡಿಸಿ ನಗರದ ಸುಭಾಷ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರಲ್ಲಿ ಘರ್ಷಣೆ ನಡೆದು ಬಿಜೆಪಿ ಕಾರ್ಯಕರ್ತರು ವಿದ್ಯಾಸಾಗರ್ ಕಾಲೇಜಿನ ಒಳಗೆ ನುಗ್ಗಿ ನವೋದಯ ಚಿಂತಕ ಹಾಗೂ ಮಹಾನ್ ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಇದು ಖಂಡನೀಯ ಎಂದು ಆಪಾದಿಸಿದರು.