<p><strong>ವಡಗೇರಾ:</strong> ‘ವಡಗೇರಾ ಪಟ್ಟಣದ ಗ್ರಾಮ ದೇವತೆ ಅಂಬಾಮಹೇಶ್ವರಿ ದೇವಿಯ ನೂತನ ದೇವಸ್ಥಾನ ಫೆ.6 ರಂದು ಲೋಕಾರ್ಪಣೆಗೊಳ್ಳಲಿದೆ’ ಎಂದು ಅಂಬಾಮಹೇಶ್ವರಿ ದೇವಿ ದೇವಸ್ಥಾನ ಸಮಿತಿಯವರು ತಿಳಿಸಿದ್ದಾರೆ.</p>.<p>‘ಫೆ.5 ರಂದು ನೂತನ ದೇವಸ್ಥಾನದಲ್ಲಿ ಹೋಮ ಹವನ ಕಳಸಾರೋಹಣ ವಾಸ್ತು ಇನ್ನಿತರ ಪೂಜೆಗಳು ಜರುಗಲಿವೆ. ಫೆ.6ರಂದು ಬೆಳಿಗ್ಗೆ 7 ಗಂಟೆಗೆ ವಿವಿಧ ಪೂಜೆ ಹಾಗೂ ನೂತನ ದೇವಸ್ಥಾನ ಲೋಕಾರ್ಪಣೆ ನಂತರ ಕುಂಭ ಕಳಸ ಹಾಲಗಂಭ ಪೂಜೆ, ಅಂಬಾ ಮಹೇಶ್ವರಿ ದೇವಿ ಹಾಗೂ ಕಾಳಿಕಾ ದೇವಿಗೆ ಉಡಿತುಂಬುವ ಕಾರ್ಯಕ್ರಮ ಹಾಗೂ ಮುತ್ತೈದೆ ಮಹಿಳೆಯರಿಗೆ ಉಡಿತುಂಬುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು ಶರಣರು ಸಂತರು ಪಾಲ್ಗೊಳ್ಳಲಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಪ್ರತಿ 3 ಮೂರು ವರ್ಷಕ್ಕೊಮ್ಮ ಹಮ್ಮಿಕೊಳ್ಳುವ ಅಂಬಾಮಹೇಶ್ವರಿ ದೇವಿಯ ಜಾತ್ರೆಯು ಫೆ.9 ಮತ್ತು 10.ರಂದು ಎರಡು ದಿನಗಳ ಕಾಲ ಅತಿ ವಿಜೃಂಭಣೆಯಿಂದ ಜರಗಲಿದೆ.</p>.<p>‘ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ‘ವಡಗೇರಾ ಪಟ್ಟಣದ ಗ್ರಾಮ ದೇವತೆ ಅಂಬಾಮಹೇಶ್ವರಿ ದೇವಿಯ ನೂತನ ದೇವಸ್ಥಾನ ಫೆ.6 ರಂದು ಲೋಕಾರ್ಪಣೆಗೊಳ್ಳಲಿದೆ’ ಎಂದು ಅಂಬಾಮಹೇಶ್ವರಿ ದೇವಿ ದೇವಸ್ಥಾನ ಸಮಿತಿಯವರು ತಿಳಿಸಿದ್ದಾರೆ.</p>.<p>‘ಫೆ.5 ರಂದು ನೂತನ ದೇವಸ್ಥಾನದಲ್ಲಿ ಹೋಮ ಹವನ ಕಳಸಾರೋಹಣ ವಾಸ್ತು ಇನ್ನಿತರ ಪೂಜೆಗಳು ಜರುಗಲಿವೆ. ಫೆ.6ರಂದು ಬೆಳಿಗ್ಗೆ 7 ಗಂಟೆಗೆ ವಿವಿಧ ಪೂಜೆ ಹಾಗೂ ನೂತನ ದೇವಸ್ಥಾನ ಲೋಕಾರ್ಪಣೆ ನಂತರ ಕುಂಭ ಕಳಸ ಹಾಲಗಂಭ ಪೂಜೆ, ಅಂಬಾ ಮಹೇಶ್ವರಿ ದೇವಿ ಹಾಗೂ ಕಾಳಿಕಾ ದೇವಿಗೆ ಉಡಿತುಂಬುವ ಕಾರ್ಯಕ್ರಮ ಹಾಗೂ ಮುತ್ತೈದೆ ಮಹಿಳೆಯರಿಗೆ ಉಡಿತುಂಬುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು ಶರಣರು ಸಂತರು ಪಾಲ್ಗೊಳ್ಳಲಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಪ್ರತಿ 3 ಮೂರು ವರ್ಷಕ್ಕೊಮ್ಮ ಹಮ್ಮಿಕೊಳ್ಳುವ ಅಂಬಾಮಹೇಶ್ವರಿ ದೇವಿಯ ಜಾತ್ರೆಯು ಫೆ.9 ಮತ್ತು 10.ರಂದು ಎರಡು ದಿನಗಳ ಕಾಲ ಅತಿ ವಿಜೃಂಭಣೆಯಿಂದ ಜರಗಲಿದೆ.</p>.<p>‘ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>