ಗ್ರಾಮ ದೇವರುಗಳಿಗೆ ಕಾಯಿ ಕರ್ಪೂರ ಅರ್ಪಿಸಿದ ನಂತರ ಪಟ್ಟಣದಲ್ಲಿ ಮನೆಮನೆಗೆ ತೆರಳಿ ರೈತರು ಬೆಳೆದ ಜೋಳ ಕಾಳು ಕಡಿ ಪದಾರ್ಥಗಳನ್ನು ಸಂಗ್ರಹಿಸಿ ಜೋಳದ ಅಂಬಲಿ ಮಾಡಿ ದೇವರಿಗೆ ನೈವೇದ್ಯ ಅರ್ಪಿಸಿದ ನಂತರ ರೈತರಿಗೆ ಮತ್ತು ಭಕ್ತರೆಲ್ಲರಿಗೂ ಅಂಬಲಿಯನ್ನು ಪ್ರಸಾದ ರೂಪದಲ್ಲಿ ವಿತರಿಸಲಾಗುವುದು. ರಾತ್ರಿ ಇಡೀ ಭಜನೆ ಹಾಗೂ ಇನ್ನಿತರ ಕಾರ್ಯಕ್ರಮಗಳು ಜರುಗುವವು ಎಂಬ ಮಾಹಿತಿ ನೀಡಿದರು.