ನಾರಾಯಣಪುರ: ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿನ ಬಾಬಾ ಸಾಹೇಬರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಪೂಜೆ ಸಲ್ಲಿಸಿ, ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಪಿಎಸ್ಐ ಸಿದ್ದೇಶ್ವರ ಗೆರಡೆ ಮಾತನಾಡಿ, ಅಂಬೇಡ್ಕರ್ ಅವರು ಭಾರತಕ್ಕೆ ಶೇಷ್ಠವಾದ ಸಂವಿಧಾನ ರಚಿಸಿಕೊಟ್ಟಿದ್ದಾರೆ ಎಂದರು.
ಯುವ ಮುಖಂಡ ರಮೇಶ ಕೋಳೂರ ಮಾತನಾಡಿ, ಅಂಬೇಡ್ಕರ್ ಅವರು ವಿಶ್ವ ಕಂಡ ಮಹಾನ್ ಚೇತನ. ಬಡವರ, ದೀನ ದಲಿತರ ಪಾಲಿನ ಆಶಾ ಕಿರಣರಾಗಿದ್ದಾರೆ. ಅವರಿಂದ ರಚಿಸಲ್ಪಟ್ಟ ಸಂವಿಧಾನವು ದೇಶವನ್ನು ಮುನ್ನಡೆಸಲು, ಪ್ರಗತಿ ಪಥದತ್ತ ಸಾಗಲು ದಾರಿ ದೀಪ ಎಂದು ಹೇಳಿದರು.