<p>ಯರಗೋಳ: ಗ್ರಾಮದ ಸಿದ್ದನಕಲ್ಲು ಗವಿಯಲ್ಲಿ 30 ವರ್ಷಗಳಿಂದ ನಿಸ್ವಾರ್ಥದಿಂದ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುತ್ತಿರುವ ಬಸವರಾಜ ಗುಳೇದ ಅವರನ್ನು ಸೋಮವಾರ ಕೋಲಿ ಸಮಾಜದ ಮುಖಂಡರು ಸನ್ಮಾನಿಸಿದರು.</p>.<p>ಸನ್ಮಾನ ಮಾಡಿ ಮಾತನಾಡಿದ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ ಅವರು, 'ಗವಿ ಸುತ್ತಲಿನ ಹಸಿರು ವಾತಾವರಣ ಮನಸ್ಸಿಗೆ ನೆಮ್ಮದಿ ತರುತ್ತದೆ. ಇದನ್ನು ಸಂರಕ್ಷಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ‘ ಎಂದರು.</p>.<p>ಕೋವಿಡ್ ಕಾರಣದಿಂದಾಗಿ ಕಳೆದ ಒಂದು ವರ್ಷದಿಂದ ಯಾವುದೇ ಕಾರ್ಯಕ್ರಮ ಮಾಡಿಲ್ಲ. ಇನ್ನು ಮುಂದೆ ಎಲ್ಲಾ ಗ್ರಾಮಗಳಲ್ಲಿ ಸಮಾಜದ ಜಿಲ್ಲಾ ಸಂಘಟನೆಯಿಂದ ನಿರಂತರ ಕಾರ್ಯಕ್ರಮಗಳು ನಡೆಯುತ್ತವೆ ಎಂದರು.</p>.<p>ಜಿಲ್ಲೆಯಲ್ಲಿ 2022-23ರಲ್ಲಿ ಪ್ರತಿ ತಾಲ್ಲೂಕಿನಲ್ಲಿ ಅಂಬಿಗರ ಚೌಡಯ್ಯ ಅವರ ರಥೋತ್ಸವ, ಜಾತ್ರೆ ನಡೆಸಲು ಚಿಂತನೆ ನಡೆಸಲಾಗಿದೆ. ಜೊತೆಗೆ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡುವುದರಿಂದ ಬಾಲ್ಯ ವಿವಾಹ ಮತ್ತು ದುಂದುವೆಚ್ಚಕ್ಕೆ ಕಡಿವಾಣ ಹಾಕಿದಂತಾಗುತ್ತದೆ. ಇದರ ಬಗ್ಗೆಯೂ ಚಿಂತನೆ ಮಾಡಲಾಗುತ್ತದೆ ಎಂದರು.</p>.<p>ಎಲ್ಲರೂ ದುಶ್ಚಟಗಳಿಂದ ದೂರವಿರಬೇಕು. ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಲು ಪಣ ತೊಡಬೇಕು. ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದು ಆರ್ಥಿಕವಾಗಿ ಬೆಳೆಯಬೇಕು ಎಂದರು.</p>.<p>ಬಸಪ್ಪ, ಶೇಖರ, ನಿಂಗಪ್ಪ, ಗುರು, ಸಿದ್ದಪ್ಪ, ಮಲ್ಲಪ್ಪ, ಗೌಡಪ್ಪ, ಮಾದೇವಪ್ಪ, ಸಣ್ಣ ಗುಂಜಲಪ್ಪ, ಬಸವರಾಜ, ಸಿದ್ದಲಿಂಗಪ್ಪ, ಶಿವು, ರವಿ, ಸುರೇಶ, ಈಶಪ್ಪ, ಶರಣಪ್ಪ, ಬಸವರಾಜ, ಮಲ್ಲು, ಬನ್ನಪ್ಪ, ಅಶೋಕ ಇದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯರಗೋಳ: ಗ್ರಾಮದ ಸಿದ್ದನಕಲ್ಲು ಗವಿಯಲ್ಲಿ 30 ವರ್ಷಗಳಿಂದ ನಿಸ್ವಾರ್ಥದಿಂದ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುತ್ತಿರುವ ಬಸವರಾಜ ಗುಳೇದ ಅವರನ್ನು ಸೋಮವಾರ ಕೋಲಿ ಸಮಾಜದ ಮುಖಂಡರು ಸನ್ಮಾನಿಸಿದರು.</p>.<p>ಸನ್ಮಾನ ಮಾಡಿ ಮಾತನಾಡಿದ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ ಅವರು, 'ಗವಿ ಸುತ್ತಲಿನ ಹಸಿರು ವಾತಾವರಣ ಮನಸ್ಸಿಗೆ ನೆಮ್ಮದಿ ತರುತ್ತದೆ. ಇದನ್ನು ಸಂರಕ್ಷಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ‘ ಎಂದರು.</p>.<p>ಕೋವಿಡ್ ಕಾರಣದಿಂದಾಗಿ ಕಳೆದ ಒಂದು ವರ್ಷದಿಂದ ಯಾವುದೇ ಕಾರ್ಯಕ್ರಮ ಮಾಡಿಲ್ಲ. ಇನ್ನು ಮುಂದೆ ಎಲ್ಲಾ ಗ್ರಾಮಗಳಲ್ಲಿ ಸಮಾಜದ ಜಿಲ್ಲಾ ಸಂಘಟನೆಯಿಂದ ನಿರಂತರ ಕಾರ್ಯಕ್ರಮಗಳು ನಡೆಯುತ್ತವೆ ಎಂದರು.</p>.<p>ಜಿಲ್ಲೆಯಲ್ಲಿ 2022-23ರಲ್ಲಿ ಪ್ರತಿ ತಾಲ್ಲೂಕಿನಲ್ಲಿ ಅಂಬಿಗರ ಚೌಡಯ್ಯ ಅವರ ರಥೋತ್ಸವ, ಜಾತ್ರೆ ನಡೆಸಲು ಚಿಂತನೆ ನಡೆಸಲಾಗಿದೆ. ಜೊತೆಗೆ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡುವುದರಿಂದ ಬಾಲ್ಯ ವಿವಾಹ ಮತ್ತು ದುಂದುವೆಚ್ಚಕ್ಕೆ ಕಡಿವಾಣ ಹಾಕಿದಂತಾಗುತ್ತದೆ. ಇದರ ಬಗ್ಗೆಯೂ ಚಿಂತನೆ ಮಾಡಲಾಗುತ್ತದೆ ಎಂದರು.</p>.<p>ಎಲ್ಲರೂ ದುಶ್ಚಟಗಳಿಂದ ದೂರವಿರಬೇಕು. ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಲು ಪಣ ತೊಡಬೇಕು. ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದು ಆರ್ಥಿಕವಾಗಿ ಬೆಳೆಯಬೇಕು ಎಂದರು.</p>.<p>ಬಸಪ್ಪ, ಶೇಖರ, ನಿಂಗಪ್ಪ, ಗುರು, ಸಿದ್ದಪ್ಪ, ಮಲ್ಲಪ್ಪ, ಗೌಡಪ್ಪ, ಮಾದೇವಪ್ಪ, ಸಣ್ಣ ಗುಂಜಲಪ್ಪ, ಬಸವರಾಜ, ಸಿದ್ದಲಿಂಗಪ್ಪ, ಶಿವು, ರವಿ, ಸುರೇಶ, ಈಶಪ್ಪ, ಶರಣಪ್ಪ, ಬಸವರಾಜ, ಮಲ್ಲು, ಬನ್ನಪ್ಪ, ಅಶೋಕ ಇದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>